ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’: ಮೂರನೇ ದಿನ !

ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ, ಉತ್ತರ ಪ್ರದೇಶದ ಕಾಶಿ ವಿಶ್ವೇಶ್ವರ ದೇವಸ್ಥಾನದ ಮುಕ್ತಿಗಾಗಿ ಕಾನೂನುಬದ್ಧವಾಗಿ ಹೋರಾಡಿದ ನ್ಯಾಯವಾದಿ ಮತ್ತು ಅರ್ಜಿದಾರರನ್ನು ಹಿಂದೂ ಜನಜಾಗೃತಿ ಸಮಿತಿಯ ಪೂರ್ವ ಮತ್ತು ಈಶಾನ್ಯ ಭಾರತದ ಧರ್ಮಪ್ರಚಾರಕ ಸದ್ಗುರು ನೀಲೇಶ ಸಿಂಗಬಾಳ ಅವರು ಗ್ರಂಥ ಉಡುಗೊರೆ ನೀಡಿ ಅವರ ಸತ್ಕಾರ ಮಾಡಿದರು.

ಶ್ರೀರಾಮ ಮಂದಿರದ ನಂತರ, ಉತ್ತರ ಪ್ರದೇಶದ ಶ್ರೀ ಕಾಶಿ ವಿಶ್ವೇಶ್ವರ ದೇವಾಲಯವು ಹಿಂದೂಗಳಿಗೆ ಅತ್ಯಂತ ದೊಡ್ಡ ಶ್ರದ್ಧಾಸ್ಥಾನವಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನ ಮುಕ್ತಿಗಾಗಿ ಕಳೆದ 40 ವರ್ಷಗಳ ಕಾಲ ಹೋರಾಟ ನಡೆಸಿದ ಶ್ರೀ. ಸೋಹನ ಲಾಲ್ ಆರ್ಯ, ಕಾನೂನುಬದ್ಧವಾಗಿ ಹೋರಾಡುವ ನ್ಯಾಯವಾದಿ ಸುಭಾಷ್ ನಂದನ್ ಚತುರ್ವೇದಿ, ನ್ಯಾಯವಾದಿ ಮದನ ಮೋಹನ ಯಾದವ, ನ್ಯಾಯವಾದಿ ದೀಪಕ ಕುಮಾರ ಸಿಂಗ ಸಹಿತ ಮಾತಾ ಶೃಂಗಾರಗೌರಿಯ ಪೂಜೆಯ ಹಕ್ಕಿಗಾಗಿ ಅರ್ಜಿ ಹಾಕಿದ ಸೌ. ಸೀತಾ ಸಾಹು ಮತ್ತು ಅವರಿಗೆ ಬೆಂಬಲಿಸಿದ ಅವರ ಪತಿ ಶ್ರೀ. ಬಾಲ ಗೋಪಾಲ ಸಾಹು, ಅರ್ಜಿದಾರರಾದ ಸೌ. ಮಂಜು ವ್ಯಾಸ ಇವರೆಲ್ಲರನ್ನು ವೈಶ್ವಿಕ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ನೆರೆದಿದ್ದ ಧರ್ಮಾಭಿಮಾನಿಗಳು ‘ಬಾಬಾ ವಿಶ್ವನಾಥಕಿ ಜೈ’, ‘ನಮ: ಪಾವರ್ತಿಪತೆ ಹರ ಹರ ಮಹಾದೇವ್’ ಎಂದು ಘೋಷಣೆ ಕೂಗಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!