
ಲೇಹ (ಲಡಾಖ) – ಲಡಾಖನ ದೌಲತ ಬೇಗ ಓಲ್ಡಿ ಪ್ರದೇಶದಲ್ಲಿ ನದಿ ದಾಟುವ ಅಭ್ಯಾಸದ ಸಮಯದಲ್ಲಿ ಸಂಭವಿಸಿದ ಅಪಘಾತದಲ್ಲಿ 5 ಸೈನಿಕರು ಸಾವನ್ನಪ್ಪಿದ್ದಾರೆ. ಕೆ. ರೆಡ್ಡಿ, ಭೂಪೇಂದ್ರ ನೇಗಿ, ಅಕ್ದುಮ ತಯಾಬಮ, ಎ. ಖಾನ ಮತ್ತು ನಾಗರಾಜ ಪಿ. ಇವು ಈ ಸೈನಿಕರ ಹೆಸರುಗಳಾಗಿವೆ. ‘ಟಿ-72’ ಯುದ್ಧವಾಹನವು ನದಿಯನ್ನು ದಾಟುತ್ತಿದ್ದಾಗ ಅನಿರೀಕ್ಷಿತವಾಗಿ ನದಿಯ ನೀರಿನ ಮಟ್ಟದಲ್ಲಿ ಹಠಾತ ಏರಿಕೆಯಾಗಿ ಈ ಅಪಘಾತ ಸಂಭವಿಸಿದೆ. ಈ ಘಟನೆಯು ಮಧ್ಯರಾತ್ರಿ 1 ಗಂಟೆಗೆ ನಡೆದಿದೆ. ಯುದ್ಧವಾಹನದಲ್ಲಿದ್ದ ಯೋಧರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. T-72 ಯುದ್ಧವಾಹನವು 3 ಜನರನ್ನು ಒಯ್ಯುತ್ತದೆ; ಆದರೆ ಅಭ್ಯಾಸ ನಡೆಯುತ್ತಿದ್ದಾಗ ಅದರಲ್ಲಿ 5 ಜನ ಸೈನಿಕರಿದ್ದರು. ಈ ಯುದ್ಧವಾಹನವು 5 ಮೀಟರ್ (16.4 ಅಡಿ) ಆಳದವರೆಗೆ ನದಿಯನ್ನು ದಾಟುವ ಸಾಮರ್ಥ್ಯವನ್ನು ಹೊಂದಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !