ಖಲಿಸ್ತಾನ್ ಸಮರ್ಥಕ ಅಮೃತಪಾಲ್ ಸಿಂಗ್ ರ ಪ್ರಮಾಣ ವಚನದ ಕುರಿತು ಚರ್ಚೆ

ವಾಷಿಂಗ್ಟನ್ – ಲೋಕಸಭೆ ಚುನಾವಣೆಯಲ್ಲಿ ಪಂಜಾಬ್ನ ಖಡೂರ್ ಸಾಹಿಬ್ ಮತದಾನ ಕ್ಷೇತ್ರದಿಂದ ಖಲಿಸ್ತಾನ್ ಪರ ಅಮೃತಪಾಲ್ ಸಿಂಗ್ ಗೆದ್ದಿದ್ದಾರೆ. ಪ್ರಸ್ತುತ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್.ಎಸ್.ಎ.) ಅಡಿಯಲ್ಲಿ ಅಸ್ಸಾಂನ ಜೈಲಿನಲ್ಲಿಡಲಾಗಿದೆ. ಸಂಸತ್ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಾಜರಾಗಲು ಅವರಿಗೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಮೆರಿಕಾದಲ್ಲಿರುವ ಸಿಖ್ ವಕೀಲರಾದ ಜಸ್ ಪ್ರೀತ್ ಸಿಂಗ್ ಅವರು ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಸಭೆಯಲ್ಲಿ ಅವರು ಖಲಿಸ್ತಾನ್ ಪರ ಅಮೃತಪಾಲ್ ಸಿಂಗ್ ಅವರ ಪ್ರಮಾಣ ವಚನ ಮತ್ತು ಬಂಧನದ ವಿಷಯವನ್ನು ಪ್ರಸ್ತಾಪಿಸಿದರು ಎಂದು ವರದಿಯಾಗಿದೆ. ಈ ಭೇಟಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ವಕೀಲ ಜಸ್ ಪ್ರೀತ್ ಸಿಂಗ್ ಹೇಳಿದ್ದಾರೆ. ಇದಕ್ಕೆ ಶೀಘ್ರವೇ ಪರಿಹಾರ ಸಿಗುವುದೆಂಬ ಅವರು ಭರವಸೆ ವ್ಯಕ್ತಪಡಿಸಿದರು.
1. ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್ ಏಂಜಲೀಸ್ ನಗರದಲ್ಲಿ ಈ ಸಭೆ ನಡೆಯಿತು. ಈ ಸಭೆಯಲ್ಲಿ ಅಮೃತಪಾಲ್ ಸಿಂಗ್ ಅವರೊಂದಿಗೆ ಸಿಖ್ಖರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕೂಡ ಮಂಡಿಸಲಾಯಿತು. ಅಮೃತಪಾಲ್ ಸಿಂಗ್ ಮೇಲೆ ತಪ್ಪು ಪದ್ದತಿ ಯಿಂದ ‘ಎನ್ ಎಸ್ ಎ’ಯನ್ನು ಹೇರಲಾಗಿದೆ. ಇದು ಸಂಪೂರ್ಣ ಕಾನೂನುಬಾಹಿರವಾಗಿದೆ, ಎಂದು ಜಸ್ ಪ್ರೀತ್ ಸಿಂಗ್ ಈ ಸಂದರ್ಭದಲ್ಲಿ ಹೇಳಿದರು.
2. ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್ ಪೊಲೀಸರು 23 ಏಪ್ರಿಲ್ 2023 ರಂದು ಬಂಧಿಸಿದ್ದರು. ಅಂದಿನಿಂದ ಅವರನ್ನು ಅಸ್ಸಾಂನ ದಿಬ್ರುಗಢ ಕಾರಾಗೃಹದಲ್ಲಿ ಬಂಧಿಯಾಗಿಡಲಾಗಿದೆ. ಖಲಿಸ್ತಾನಿ ಸಿದ್ಧಾಂತಕ್ಕೆ ಬೆಂಬಲ ನೀಡಿದ್ದರಿಂದ ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ ಪ್ರಕರಣ ದಾಖಲಿಸಲಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation