
ವಾಷಿಂಗ್ಟನ್ (ಅಮೇರಿಕಾ) – ಭಯೋತ್ಪಾದನೆಯಿಂದಾಗಿ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುತ್ತಿಲ್ಲ ಎಂಬುದು ಭಾರತದ ಆಗ್ರಹವಾಗಿದೆ. ಇದನ್ನು ಗಮನಿಸಿದರೆ ಭಾರತ ಮತ್ತು ಪಾಕಿಸ್ತಾನದ ಜೊತೆಗೆ ಅಮೇರಿಕಾದ ಸಂಬಂಧ ಯಾವ ಮಟ್ಟದಲ್ಲಿದೆ?’, ಎಂದು ಅಮೇರಿಕಾದ ವಿದೇಶಾಂಗ ಸಚಿವಾಲಯದ ಮುಖ್ಯ ಉಪ ವಕ್ತಾರ ವೇದಾಂತ್ ಪಟೇಲ್ ಅವರಿಗೆ ಅಲ್ಲಿನ ಪತ್ರಿಕಾಗೋಷ್ಠಿಯಲ್ಲಿ ಕೇಳಲಾಯಿತು. ಈ ಪ್ರಶ್ನೆಗೆ ಉತ್ತರಿಸಿದ ಅವರು, ‘ವಿಶ್ವದ ಯಾವುದೇ ದೇಶವು ಯಾವುದೇ ರೀತಿಯ ಭಯೋತ್ಪಾದನೆಯನ್ನು ಖಂಡಿಸುತ್ತದೆ ಎಂದು ನಮಗೆ ವಿಶ್ವಾಸವಿದೆ. ತನ್ನ ನೆರೆಹೊರೆಯವರೊಂದಿಗೆ ಹೆಚ್ಚು ಸಕಾರಾತ್ಮಕ ಸಂಬಂಧಗಳನ್ನು ನಿರ್ಮಿಸುವ ಪ್ರತಿಯೊಂದು ದೇಶವನ್ನು ಅಮೇರಿಕಾ ಸ್ವಾಗತಿಸುತ್ತದೆ; ಆದರೆ ಅಂತಿಮವಾಗಿ ಅದು ಭಾರತ ಮತ್ತು ಪಾಕಿಸ್ತಾನದ ಮೇಲೆ ಅವಲಂಬಿತವಾಗಿದೆ, ಅವರು ಭಯೋತ್ಪಾದನೆಯನ್ನು ಯಾವ ದೃಷ್ಟಿಯಿಂದ ನೋಡುತ್ತಾರೆ?’
ಪಟೇಲ್ ಅವರು ಮುಂದೆ ಮಾತನಾಡಿ, ಭಾರತದ ಅನೇಕ ಕ್ಷೇತ್ರಗಳಲ್ಲಿ ನಮ್ಮ ಸಂಬಂಧವನ್ನು ಇನ್ನಷ್ಟು ಬಲಪಡಿಸುತ್ತಿದ್ದೇವೆ. ವಿಶೇಷವಾಗಿ ನಮ್ಮ ಆರ್ಥಿಕ ಸಂಬಂಧಗಳನ್ನು ಬಲಪಡಿಸುವುದಕ್ಕೆ ಹೆಚ್ಚು ಪ್ರಯತ್ನಿಸುತ್ತಿದ್ದೇವೆ ಎಂದವರು ಹೇಳಿದರು.
ಸಂಪಾದಕೀಯ ನಿಲುವುಪ್ರಪಂಚದ ಕೆಲವು ದೇಶಗಳು ಭಯೋತ್ಪಾದಕರ ನಿರ್ಮಾಣದ ಕಾರ್ಖಾನೆಗಳಾಗಿ ಮಾರ್ಪಟ್ಟಿವೆ ಮತ್ತು ಅವರು ಮೇಲ್ನೋಟಕ್ಕೆ ಮಾತ್ರ ಭಯೋತ್ಪಾದನೆ ವಿರೋಧ ಮಾಡುವ ನಟನೆ ಮಾಡುತ್ತಾರೆ. ಇಂತಹವರನ್ನು ಈಗ ಬಹಿರಂಗಪಡಿಸುವ ಅವಶ್ಯಕತೆ ಇದೆ ಎಂದು ಅಮೇರಿಕಾ ಎಂದಾದರೂ ಹೇಳಿದೆಯೇ? |
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದದ ಮಧ್ಯವರ್ತಿಯಾಗಿ ಶ್ರೇಯಸ್ಸು ಪಡೆದ ಪಾಕಿಸ್ತಾನ ! : US Iran Peace Deal
ಐ.ಎಸ್.ಐ.ಗೆ ಸಂಬಂಧಿಸಿದ ಭಯೋತ್ಪಾದಕ ಗುಂಪಿನ ಇನ್ನೂ 5 ಜನರನ್ನು ಬಂಧನ : ISI Terrorist Arrested
ಅಮೆರಿಕ-ಇರಾನ್ ನಡುವೆ ಅಂತಿಮವಾಗಿ ಕದನ ವಿರಾಮ ಒಪ್ಪಂದ! : US-Iran Peace Deal
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಸಿಗಬೇಕು! – ಫ್ರಾನ್ಸ್
ಪಾಕಿಸ್ತಾನದ ಗುರುದ್ವಾರಕ್ಕೆ ನುಗ್ಗಿ ಸಿಖ್ ಸೇವಕ ದಂಪತಿಯ ಹತ್ಯೆ
ಇರಾನ್ಗೆ ಈಗ ಅಣುಬಾಂಬ್ಗಿಂತಲೂ ಹೆಚ್ಚು ಪರಿಣಾಮಕಾರಿಯಾದ ಅಸ್ತ್ರ ಸಿಕ್ಕಿದೆ!