
ಇಸ್ಲಾಮಾಬಾದ್ – ಭಾರತಕ್ಕೆ ಬೇಕಾಗಿರುವ ಭಯೋತ್ಪಾದಕರಲ್ಲಿ ಒಬ್ಬನಾದ ಗಾಜಿ ಶಹಜಾದ್ ಎಂಬ ಭಯೋತ್ಪಾದಕ ಪಾಕ್ ಆಕ್ರಮಿತ ಕಾಶ್ಮೀರದ ರಾವಲ್ಕೋಟ್ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಇತರ 19 ಕೈದಿಗಳು ಕೂಡ ಜೈಲಿನಿಂದ ಪರಾರಿಯಾಗಿದ್ದಾರೆ. ಗಾಜಿ ಶಹಜಾದ್ ನಿಷೇಧಿತ ಸಂಘಟನೆಯೊಂದರ ಸದಸ್ಯನಾಗಿದ್ದು, ಅವನನ್ನು ಭಾರತವು ‘ಮೋಸ್ಟ್ ವಾಂಟೆಡ್’ ಎಂದು ಘೋಷಿಸಿದೆ.
ಕೈದಿಗಳು ಬಂದೂಕು ತೋರಿಸಿ ಕಾರಾಗೃಹದ ಸಿಬ್ಬಂದಿಯನ್ನು ವಶಕ್ಕೆ ಪಡೆದರು ಮತ್ತು ಕೀಲಿಗಳನ್ನು ಕಿತ್ತುಕೊಂಡರು. ತಪ್ಪಿಸಿಕೊಳ್ಳಲು ಯೋಜಿಸಿದ ಕೈದಿಗಳು ಮುಖ್ಯ ದ್ವಾರದಲ್ಲಿರುವ ಭದ್ರತಾ ಸಿಬ್ಬಂದಿಯನ್ನು ಸುತ್ತುವರೆದರು. ಆಗ ಕೈದಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ಗುಂಡಿನ ದಾಳಿಯಲ್ಲಿ ಖೈಯಾಮ್ ಸಯೀದ್ ಎಂಬ ಕೈದಿಯು ಸಾವನ್ನಪ್ಪಿದನು.
ಪರಾರಿಯಾಗಿರುವ ಕೈದಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ರಿಯಾಜ್ ಮುಘಲ್ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಕೆಲವು ಜೈಲು ಅಧಿಕಾರಿಗಳನ್ನು ಬಂಧಿಸಲಾಗಿದ್ದು, ಹಾಗೂ ಇನ್ನು ಕೆಲವರನ್ನು ವಜಾಗೊಳಿಸಲಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara