
ಗುರುಪೂರ್ಣಿಮೆಯ ಅವಧಿಯಲ್ಲಿ ನಾವು ಎಷ್ಟು ತಳಮಳದಿಂದ ಸೇವೆ ಮಾಡುವೆವೊ, ಅಷ್ಟು ನಮಗೆ ಅದರಿಂದ ಹೆಚ್ಚು ಲಾಭವಾಗುತ್ತದೆ. ನಾವು ನಮ್ಮನ್ನು ಪೂರ್ಣ ಮೈಮರೆತು ಸೇವೆ ಮಾಡಿದರೆ, ಗುರುಗಳ ಚರಣಗಳ ಹತ್ತಿರ ಬೇಗನೆ ತಲುಪಬಹುದು. ವ್ಯವಹಾರದಲ್ಲಿ ಶಿಕ್ಷಣ ಪಡೆಯುವಾಗ ವಾರ್ಷಿಕ ಪರೀಕ್ಷೆ ಸಮೀಪಿಸಿದಾಗ ನಾವು ಉಳಿದ ಎಲ್ಲ ವಿಷಯಗಳನ್ನು ಪಕ್ಕಕ್ಕಿಟ್ಟು ೧-೨ ತಿಂಗಳು ಕೇವಲ ಅಧ್ಯಯನದ ಕಡೆಗೆ ಗಮನ ನೀಡುತ್ತೇವೆ. ಅದೇ ರೀತಿ ಪ್ರಯತ್ನ ಗುರುಪೂರ್ಣಿಮೆಯ ಸೇವೆ ಮಾಡುವಾಗ ಮಾಡಿದರೆ ನಾವು ಗುರುಪೂರ್ಣಿಮೆಯ ಪರೀಕ್ಷೆಯಲ್ಲಿ ಖಂಡಿತ ತೇರ್ಗಡೆಯಾಗಿ ನಾವು ಮಾಡಿದ ಸೇವೆಯ ಫಲ ಗುರುಗಳು ನಮಗೆ ಕೊಡುವರು.
ಜೀವನದಲ್ಲಿನ ಸರ್ವೋಚ್ಚ ಆನಂದದತ್ತ ಕೊಂಡೊಯ್ಯುವ, ಈಶ್ವರಪ್ರಾಪ್ತಿಯ ಮಾರ್ಗವನ್ನು ತೋರಿಸುವ ಗುರುಗಳ ಬಗ್ಗೆ ಕೃತಜ್ಞತೆಯನ್ನು ಸಲ್ಲಿಸುವ ದಿನ ಅಂದರೆ ಗುರುಪೂರ್ಣಿಮೆ !
ಜಗತ್ತಿನಲ್ಲಿ ಎಲ್ಲಿಯೂ ಕಾಣದಂತಹ ವೈಶಿಷ್ಟ್ಯ ಎಂದರೆ ಭಾರತದ ಗುರುಪರಂಪರೆ ! ಗುರುತತ್ತ್ವವು ಎಲ್ಲೆಡೆ ಒಂದೇ ಇರುತ್ತದೆ. ಆ ದಿನ ಆದಿಗುರು ವ್ಯಾಸರ ಪೂಜೆ ಮಾಡುತ್ತಾರೆ. ಗುರುಚರಣಗಳಲ್ಲಿ ಲೀನವಾಗಿ ಹೆಚ್ಚೆಚ್ಚು ಕೃತಜ್ಞತೆ ವ್ಯಕ್ತಪಡಿಸುವ ಮತ್ತು ಶರಣಾಗತಭಾವದಿಂದ ಗುರುಗಳೊಂದಿಗೆ ಅನುಸಂಧಾನವನ್ನಿಡುವ ದಿನ ! ಈ ದಿನ ಪ್ರತಿಯೊಬ್ಬರು ಅಂತರ್ಮುಖರಾಗಿ ಮತ್ತು ಕೃತಜ್ಞತೆಯನ್ನು ವೃದ್ಧಿಗೊಳಿಸಿ ಗುರುತತ್ತ್ವದ ಲಾಭ ಪಡೆಯಬೇಕು !
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು