
ನವದೆಹಲಿ – ದೇಶದ ಪ್ರಮುಖ ದೂರಸಂಚಾರ ಸಂಸ್ಥೆಗಳು ಕೆಲವು ದಿನಗಳ ಹಿಂದೆ ಮೊಬೈಲ್ ರೀಚಾರ್ಜ ಪ್ಲಾನ’ ದರವನ್ನು ಶೇಕಡಾ 11 ರಿಂದ 25 ರಷ್ಟು ಹೆಚ್ಚಿಸಿವೆ. ಕೇಂದ್ರ ಸರಕಾರ ಅಥವಾ ದೂರಸಂಚಾರ ನಿಯಂತ್ರಕ `ಟ್ರಾಯ್’ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಸಧ್ಯಕ್ಕಂತೂ ‘ಸರಕಾರಿ ಅಧಿಕಾರಿಗಳು ಮಧ್ಯಪ್ರವೇಶಿಸುವಷ್ಟು ಪರಿಸ್ಥಿತಿ ಗಂಭೀರವಾಗಿಲ್ಲ. ಗ್ರಾಹಕರು ಸ್ವಲ್ಪ ಹೊರೆಯನ್ನು ಸಹಿಸಬೇಕಾಗುತ್ತದೆ. ಕಾರಣ ಮೂರು ವರ್ಷಗಳ ನಂತರ ದರವನ್ನು ಹೆಚ್ಚಿಸಲಾಗಿದೆ ಎಂದು ಸರಕಾರ ಸ್ಪಷ್ಟನೆ ನೀಡಿದೆ. ಇದರಿಂದಾಗಿ ದೇಶದಾದ್ಯಂತ ಗ್ರಾಹಕರು ದುಬಾರಿ ರೀಚಾರ್ಜ್ ಪ್ಲಾನ್ ಬಳಸಬೇಕಾಗುತ್ತದೆ ಎಂಬುದು ಸ್ಪಷ್ಟವಾಗಿದೆ. ‘ದೂರಸಂಚಾರ ಸಂಸ್ಥೆಗಳು ತಮ್ಮ ಸೇವಾ ದರ್ಜೆಯನ್ನು ಸುಧಾರಿಸಲು ಹೆಚ್ಚಿನ ಒತ್ತು ನೀಡಬೇಕು’ ಎಂದು ಕೇಂದ್ರ ಸರಕಾರ ಸೂಚನೆಯನ್ನು ನೀಡಿದೆ. (ದೂರಸಂಚಾರ ಸಂಸ್ಥೆಗಳು ಸೇವೆಯ ದರ್ಜೆಯನ್ನು ಸುಧಾರಿಸದಿದ್ದರೆ, ಸರಕಾರ ಅವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳುತ್ತದೆ? ಎನ್ನುವುದೂ ಕೂಡ ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು! – ಸಂಪಾದಕರು)
ಸಂಪಾದಕೀಯ ನಿಲುವುಪೆಟ್ರೋಲ್-ಡೀಸೆಲ್ ಬೆಲೆಗಳನ್ನು ಕಡಿಮೆ ಮಾಡಲು ಸಾಧ್ಯವಾಗದಿರುವ ಸರಕಾರಕ್ಕೆ ಖಾಸಗಿ ಸಂಸ್ಥೆಗಳ ರೀಚಾರ್ಜ್ ಪ್ಲಾನ್ ಗಳನ್ನು ಕಡಿಮೆ ಮಾಡಲು ಮಧ್ಯ ಪ್ರವೇಶಿಸುತ್ತದೆ ಎಂದು ನಿರೀಕ್ಷಿಸುವುದು ತಪ್ಪಾಗಿದೆ. |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!