
ನವದೆಹಲಿ – ದೇಶದ ಪ್ರಮುಖ ದೂರಸಂಚಾರ ಸಂಸ್ಥೆಗಳು ಕೆಲವು ದಿನಗಳ ಹಿಂದೆ ಮೊಬೈಲ್ ರೀಚಾರ್ಜ ಪ್ಲಾನ’ ದರವನ್ನು ಶೇಕಡಾ 11 ರಿಂದ 25 ರಷ್ಟು ಹೆಚ್ಚಿಸಿವೆ. ಕೇಂದ್ರ ಸರಕಾರ ಅಥವಾ ದೂರಸಂಚಾರ ನಿಯಂತ್ರಕ `ಟ್ರಾಯ್’ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಸಧ್ಯಕ್ಕಂತೂ ‘ಸರಕಾರಿ ಅಧಿಕಾರಿಗಳು ಮಧ್ಯಪ್ರವೇಶಿಸುವಷ್ಟು ಪರಿಸ್ಥಿತಿ ಗಂಭೀರವಾಗಿಲ್ಲ. ಗ್ರಾಹಕರು ಸ್ವಲ್ಪ ಹೊರೆಯನ್ನು ಸಹಿಸಬೇಕಾಗುತ್ತದೆ. ಕಾರಣ ಮೂರು ವರ್ಷಗಳ ನಂತರ ದರವನ್ನು ಹೆಚ್ಚಿಸಲಾಗಿದೆ ಎಂದು ಸರಕಾರ ಸ್ಪಷ್ಟನೆ ನೀಡಿದೆ. ಇದರಿಂದಾಗಿ ದೇಶದಾದ್ಯಂತ ಗ್ರಾಹಕರು ದುಬಾರಿ ರೀಚಾರ್ಜ್ ಪ್ಲಾನ್ ಬಳಸಬೇಕಾಗುತ್ತದೆ ಎಂಬುದು ಸ್ಪಷ್ಟವಾಗಿದೆ. ‘ದೂರಸಂಚಾರ ಸಂಸ್ಥೆಗಳು ತಮ್ಮ ಸೇವಾ ದರ್ಜೆಯನ್ನು ಸುಧಾರಿಸಲು ಹೆಚ್ಚಿನ ಒತ್ತು ನೀಡಬೇಕು’ ಎಂದು ಕೇಂದ್ರ ಸರಕಾರ ಸೂಚನೆಯನ್ನು ನೀಡಿದೆ. (ದೂರಸಂಚಾರ ಸಂಸ್ಥೆಗಳು ಸೇವೆಯ ದರ್ಜೆಯನ್ನು ಸುಧಾರಿಸದಿದ್ದರೆ, ಸರಕಾರ ಅವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳುತ್ತದೆ? ಎನ್ನುವುದೂ ಕೂಡ ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು! – ಸಂಪಾದಕರು)
ಸಂಪಾದಕೀಯ ನಿಲುವುಪೆಟ್ರೋಲ್-ಡೀಸೆಲ್ ಬೆಲೆಗಳನ್ನು ಕಡಿಮೆ ಮಾಡಲು ಸಾಧ್ಯವಾಗದಿರುವ ಸರಕಾರಕ್ಕೆ ಖಾಸಗಿ ಸಂಸ್ಥೆಗಳ ರೀಚಾರ್ಜ್ ಪ್ಲಾನ್ ಗಳನ್ನು ಕಡಿಮೆ ಮಾಡಲು ಮಧ್ಯ ಪ್ರವೇಶಿಸುತ್ತದೆ ಎಂದು ನಿರೀಕ್ಷಿಸುವುದು ತಪ್ಪಾಗಿದೆ. |
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!