ಕೇರಳ ರಾಜ್ಯದ 8 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಎಚ್ಚರಿಕೆ

ವಾಯನಾಡ (ಕೇರಳ) – ವಾಯನಾಡನಲ್ಲಿ ಧಾರಾಕಾರ ಮಲೆಯ ನಂತರ ಸಂಭವಿಸಿದ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ ಈಗ 165 ಕ್ಕೆ ಏರಿದೆ. 220ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಮುಂಡಕ್ಕಾಯಿ, ಚುರಾಮಾಲಾ, ಅಟ್ಟಾಮಾಲಾ ಮತ್ತು ನೂಲಪುಳಾ ಗ್ರಾಮಗಳಲ್ಲಿ ಜುಲೈ 29 ರ ತಡರಾತ್ರಿ ಭೂಕುಸಿತ ನಡೆದಿತ್ತು. ಅದರಲ್ಲಿ ಹಲವು ಮನೆಗಳು, ಸೇತುವೆಗಳು, ರಸ್ತೆಗಳು ಮತ್ತು ವಾಹನಗಳು ಕೊಚ್ಚಿ ಹೋಗಿವೆ. ಈ ಅಪಘಾತದ ನಂತರ ರಾಜ್ಯದಲ್ಲಿ 2 ದಿನಗಳ ರಾಜಕೀಯ ಶೋಕಾಚರಣೆ ಘೋಷಿಸಲಾಗಿದೆ. ಅಲ್ಲದೆ, ರಾಜ್ಯದ 12 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
1. ಭಾರತೀಯ ಸೇನೆ, ವಾಯುಪಡೆ, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿದೆ. ಜುಲೈ 30 ರಂದು, 225 ಸೈನಿಕರನ್ನು ಕನ್ನೂರಿನಿಂದ ವಾಯನಾಡಿಗೆ ಕಳುಹಿಸಲಾಗಿದೆ.
2. ಹವಾಮಾನ ಇಲಾಖೆಯು ಜುಲೈ 31 ರಂದು ವಾಯನಾಡ, ಮಲಪ್ಪುರಂ, ಕೋಝಿಕೋಡ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು ಸೇರಿದಂತೆ 5 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ ಹಾಗೂ ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ’ (ಸಾಧಾರಣ ಮಳೆ) ಎಚ್ಚರಿಕೆಯನ್ನು ನೀಡಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ