‘ಮುಖ್ಯಮಂತ್ರಿ – ಮಾಝಿ ಲಾಡ್ಕಿ ಬಹಿನ್ ಯೋಜನಾ’ (ಮುಖ್ಯಮಂತ್ರಿ – ನನ್ನ ಅಕ್ಕರೆಯ ಸಹೋದರಿ ಯೋಜನೆ)

ಮುಂಬಯಿ – ಮುಖ್ಯಮಂತ್ರಿ – ಮಾಝಿ ಲಾಡ್ಕಿ ಬಹಿನ್ ಯೋಜನೆಯು(ಮುಖ್ಯಮಂತ್ರಿ – ನನ್ನ ಅಕ್ಕರೆಯ ಸಹೋದರಿ ಯೋಜನೆ) ಸರಕಾರದ ಕಾರ್ಯತಂತ್ರದ ನಿರ್ಧಾರವಾಗಿದೆ. ಆದ್ದರಿಂದ ಈ ಯೋಜನೆಯನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿ ಮುಂಬಯಿ ಉಚ್ಚ ನ್ಯಾಯಾಲಯವು ಯೋಜನೆಯನ್ನು ಸ್ಥಗಿತಗೊಳಿಸುವ ಮನವಿಯನ್ನು ತಿರಸ್ಕರಿಸಿದೆ. ನವಿ ಮುಂಬಯಿ ಮೂಲದ ಅಕೌಂಟೆಂಟ್(ಲೆಕ್ಕ ಪರಿಶೋಧಕ) ನವೀದ್ ಅಬ್ದುಲ್ ಸಯೀದ್ ಮುಲ್ಲಾ ಅವರು ನ್ಯಾಯವಾದಿ ಓವೆಸ್ ಪೆಚ್ಕರ್ ಮೂಲಕ ಅರ್ಜಿಯನ್ನು ದಾಖಲಿಸಿದ್ದರು.
‘ಮುಖ್ಯಮಂತ್ರಿ – ಮಾಝಿ ಲಾಡ್ಕಿ ಬಹಿನ್ ಯೋಜನೆ’ಗಾಗಿ (ಮುಖ್ಯಮಂತ್ರಿ – ನನ್ನ ಅಕ್ಕರೆಯ ಸಹೋದರಿ ಯೋಜನೆ) 24 ಸಾವಿರದ 600 ಕೋಟಿ ರೂಪಾಯಿ ಖರ್ಚು ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಈಗಾಗಲೇ 7.8 ಲಕ್ಷ ಕೋಟಿ ಸಾಲವಿದೆ. ಈ ಯೋಜನೆಯಿಂದಾಗಿ ಸರಕಾರದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆ ಬೀಳಲಿದೆ. ರಾಜ್ಯದ ಹಣಕಾಸು ಇಲಾಖೆ ಕೂಡ ಈ ಯೋಜನೆಯ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು; ಆದರೆ, ಸಚಿವ ಸಂಪುಟ ಸಭೆಯಲ್ಲಿ ರಾಜಕೀಯ ಉದ್ದೇಶದಿಂದ ರಾಜ್ಯ ಸರಕಾರವು ಈ ಯೋಜನೆಗೆ ಅನುಮೋದನೆ ನೀಡಿದೆ ಎಂದು ಮನವಿಯಲ್ಲಿ ಹೇಳಲಾಗಿದೆ. ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರ ವಿಭಾಗೀಯ ಪೀಠದ ಮುಂದೆ ಈ ವಿಚಾರಣೆ ನಡೆಯಿತು.
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
ಪಂಜಾಬ್ ಸಿಎಂ ಭಗವಂತ್ ಮಾನ್ ‘ಗುರು ದ್ರೋಹಿ’ ಎಂದು ಘೋಷಿಸಿದ ಅಕಾಲ ತಖ್ತ್
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ