ಮಲಯಾಳಿ ಬ್ರಾಹ್ಮಣ ಅರ್ಚಕರು ಇರಬೇಕು ಎನ್ನುವ ನಿಯಮಕ್ಕೆ ವಿರೋಧ ವ್ಯಕ್ತವಾಗುತ್ತಿದೆ

ನವದೆಹಲಿ – ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದ ಮೇಲಶಾಂತಿ (ಮುಖ್ಯ ಅರ್ಚಕ) ಹುದ್ದೆಗೆ ಕೇವಲ ಮಲಯಾಳಿ ಬ್ರಾಹ್ಮಣರನ್ನು ನೇಮಿಸುವ ವಿಚಾರದಲ್ಲಿ ಸರ್ವೋಚ್ಚ ನ್ಯಾಯಾಲಯವು ಕೇರಳ ಸರಕಾರದಿಂದ ಉತ್ತರವನ್ನು ಕೋರಿದೆ. ತ್ರಾವಣಕೋರ ದೇವಸ್ವಂ ಮಂಡಳಿಯು ಒಂದು ಅಧಿಸೂಚನೆ ಹೊರಡಿಸಿತ್ತು. ಅದರಲ್ಲಿ ಅರ್ಹತಾ ಮಾನದಂಡಗಳಲ್ಲಿ ಮಲಯಾಳಿ ಬ್ರಾಹ್ಮಣನಾಗಿರುವುದು ಕಡ್ಡಾಯವಾಗಿದೆ ಎಂದು ತಿಳಿಸಲಾಗಿತ್ತು. ಇದನ್ನು ವಿರೋಧಿಸಿ ಕೇರಳ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅಲ್ಲಿ ಆ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಈ ನಿರ್ಣಯವನ್ನು ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇದರ ಮುಂದಿನ ವಿಚಾರಣೆ ಅಕ್ಟೋಬರ್ 25ರಂದು ನಡೆಯಲಿದೆ.
ಈ ಪ್ರಕರಣದಲ್ಲಿ ತ್ರಾವಣಕೋರ ದೇವಸ್ವಂ ಮಂಡಳಿಯು ಮೆಲಶಾಂತಿಗಾಗಿ ಮಾಡಿರುವ ನೇಮಕಾತಿಯ ವಿರುದ್ಧ ಇಬ್ಬರು ಬ್ರಾಹ್ಮಣೇತರ ಅರ್ಚಕರು ಕೇರಳ ಉಚ್ಚನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಕೇರಳ ಉಚ್ಚನ್ಯಾಯಾಲಯವು ತ್ರಾವಣಕೋರ ದೇವಸ್ವಂ ಮಂಡಳಿ ಅಧಿಸೂಚನೆಯು ಅಸ್ಪ್ರಶ್ಯತೆಯನ್ನು ನಿರ್ಮಾಣಮಾಡಿದೆಯೆನ್ನುವ ಅರ್ಜಿದಾರರ ವಾದವನ್ನು ತಿರಸ್ಕರಿಸಿತ್ತು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ