ರಾಜಕೀಯ ಪಕ್ಷಗಳಿಂದ ಪ್ರತಿಭಟನೆ !

ಕೋಲಕಾತಾ (ಬಂಗಾಳ) – ನಗರದ ಸರಕಾರಿ ಆಸ್ಪತ್ರೆಯಲ್ಲಿ ತರಬೇತಿ ನಿರತ ಮಹಿಳಾ ವೈದ್ಯೆಯ ಶವ ಪತ್ತೆಯಾಗಿದೆ. ವೈದ್ಯೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಕಂಡು ಬಂದಿದೆ. ಮೃತದೇಹದ ಮೇಲೆ ಹಲವೆಡೆ ಗಾಯಗಳಾಗಿವೆ. ಕೋಲಕಾತಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಅನುಮಾನಾಸ್ಪದ ಚಟುವಟಿಕೆಗಾಗಿ ವ್ಯಕ್ತಿಯೊಬ್ಬನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಈ ಹತ್ಯೆಯನ್ನು ವಿರೋಧಿಸಿ ವೈದ್ಯಕೀಯ ವಿದ್ಯಾರ್ಥಿಗಳು, ಬಿಜೆಪಿ, ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೃತ ಮಹಿಳೆಯ ಪೋಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಮತ್ತು ಬಂಗಾಳ ಬಿಜೆಪಿ ಸಹ-ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಮಮತಾ ಬ್ಯಾನರ್ಜಿ ಸರಕಾರವು ಈ ಹತ್ಯೆ ವಿಷಯವನ್ನು ಮರೆ ಮಾಚಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಮಹಿಳೆಯರ ವಿರುದ್ಧದ ಇಂತಹ ಅಪರಾಧಗಳನ್ನು ಬಂಗಾಳ ಸರ್ಕಾರವು ಇನ್ನೆಷ್ಟು ದಿನಗಳ ಕಾಲ ಹೀಗೆ ನಿರ್ಲಕ್ಷ್ಯ ಮಾಡುವುದು ಎಂದವರು ಪ್ರಶ್ನಿಸಿದರು.
ಸಂಪಾದಕೀಯ ನಿಲುವುಎಲ್ಲಿಯವೆರೆಗೆ ಅತ್ಯಾಚಾರಿಗಳಿಗೆ ನಡುರಸ್ತೆಯಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗುವುದಿಲ್ಲವೋ, ಅಲ್ಲಿಯವರೆಗೆ ಇಂತಹ ಕಾಮುಕರಿಗೆ ಕಾನೂನಿನ ಬಿಸಿ ತಟ್ಟುವುದಿಲ್ಲ ! |
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ಪಿಒಕೆ ಪ್ರತಿಭಟನಾಕಾರರ ದಬ್ಬಾಳಿಕೆ; ವಿಶ್ವಸಂಸ್ಥೆ ಕಳವಳ : UN Concern PoK
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಅನ್ಯಾಯದ ಬಂಧನದ ವಿರುದ್ಧ ಅಲ್ಪಸಂಖ್ಯಾತರಿಂದ ಪ್ರತಿಭಟನೆ !