
ಢಾಕಾ – ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರಕಾರವನ್ನು ಪದಚ್ಯುತಗೊಳಿಸಿ ಮಧ್ಯಂತರ ಸರಕಾರವನ್ನು ಸ್ಥಾಪಿಸಿದ ನಂತರ ಬಾಂಗ್ಲಾದೇಶದಲ್ಲಿ ಹೊಸ ಬೇಡಿಕೆಗಳೊಂದಿಗೆ ಪ್ರತಿಭಟನೆಗಳು ಮತ್ತು ಹಿಂಸಾಚಾರಗಳು ಆರಂಭವಾಗಿವೆ. ಬಾಂಗ್ಲಾದೇಶದಲ್ಲಿ, ಆಗಸ್ಟ್ 15ರಂದು ‘ಶೋಕ ದಿನ’ವನ್ನಾಗಿ ಆಚರಿಸಲು ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದರು. ರಾಜಧಾನಿ ಢಾಕಾದ ಶಹೀದ್ ಮಿನಾರ್ನಲ್ಲಿ ವಿವಿಧ ವಿದ್ಯಾರ್ಥಿ ಗುಂಪುಗಳ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ‘ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ವಾಪಸ್ ದೇಶಕ್ಕೆ ಕರೆತಂದು ಕಾನೂನು ಕ್ರಮ ಜರುಗಿಸಬೇಕು’ ಎಂದು ಅವರು ಆಗ್ರಹಿಸಿದರು.
ಇಸ್ಲಾಮಿಕ್ ಆಧಾರದಲ್ಲಿ ಬಾಂಗ್ಲಾದೇಶದ ಇತಿಹಾಸವನ್ನು ಬರೆಯಲಾಗುವುದು ! – ಜಮಾತ್-ಎ-ಇಸ್ಲಾಮಿ
ಬಾಂಗ್ಲಾದೇಶದ ‘ಶೋಕ ದಿನ’ವನ್ನು ಬಹಿಷ್ಕರಿಸಿದ ಜಮಾತ್-ಎ-ಇಸ್ಲಾಮಿ ಸಂಘಟನೆಯ ವಿದ್ಯಾರ್ಥಿಗಳು, ಬಾಂಗ್ಲಾದೇಶದ ಹೊಸ ಇತಿಹಾಸವನ್ನು ಈಗ ಬರೆಯಲಾಗುವುದು ಮತ್ತು ಅದನ್ನು ಇಸ್ಲಾಮಿಕ್ ಆಧಾರದ ಮೇಲೆ ಗುರುತಿಸಲಾಗುವುದು ಎಂದು ಹೇಳಿದರು. ಈ ನಡುವೆ ಪ್ರತಿಭಟನಾಕಾರರು ಶೇಖ್ ಹಸೀನಾ ಅವರ ಮನೆಗೂ ಮುತ್ತಿಗೆ ಹಾಕಿದರು. ಹಲವೆಡೆ ಹಿಂಸಾಚಾರ ನಡೆದಿದ್ದು ಆವಾಮಿ ಕಾರ್ಯಕರ್ತರನ್ನು ಥಳಿಸಿರುವುದು ವರದಿಯಾಗಿದೆ.
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಪಿಒಕೆ ಪ್ರತಿಭಟನಾಕಾರರ ದಬ್ಬಾಳಿಕೆ; ವಿಶ್ವಸಂಸ್ಥೆ ಕಳವಳ : UN Concern PoK
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಅನ್ಯಾಯದ ಬಂಧನದ ವಿರುದ್ಧ ಅಲ್ಪಸಂಖ್ಯಾತರಿಂದ ಪ್ರತಿಭಟನೆ !
ಪಾಕಿಸ್ತಾನದ ಕ್ರಿಕೆಟಿಗ ಮಹಮ್ಮದ್ ನವಾಜ್ ಮೇಲೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯಿಂದ ೩ ತಿಂಗಳು ನಿಷೇಧ !
ಅಮೆರಿಕಾ ೧೮ ಸಾವಿರ ಭಾರತೀಯ ನಾಗರಿಕರನ್ನು ದೇಶದಿಂದ ಹೊರಹಾಕಲಿದೆ !
ಇರಾನ್ ದಾಳಿ; ಜೋರ್ಡಾನ್ನಲ್ಲಿದ್ದ ಇಬ್ಬರು ಅಮೆರಿಕನ್ ಸೈನಿಕರ ಸಾವು – ಅಮೆರಿಕ ತಿರುಗೇಟು !