ಕೇಂದ್ರವು ಬಾಂಗ್ಲಾದೇಶದಲ್ಲಿನ ಹಿಂದೂಗಳನ್ನು ರಕ್ಷಿಸಬೇಕು ! – ಸಚಿವ ದಿನೇಶ ಗುಂಡೂರಾವ್

ಬೆಂಗಳೂರು – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಅವರು ಸ್ವಾತಂತ್ರ್ಯ ದಿನದ ನಿಮಿತ್ತ ಮಾತನಾಡುತ್ತಾ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆದ ದಾಳಿಯನ್ನು ಟೀಕಿಸಿದರು, ಅವರು, ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಕೆಲವು ಘಟನೆಗಳಿಂದ ಎಲ್ಲಾ ಭಾರತೀಯರಿಗೆ ತುಂಬಾ ದುಃಖ ಆಗಿದೆ. ಹಿಂದೂಗಳ ರಕ್ಷಣೆಗಾಗಿ ಕೇಂದ್ರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.