ಬೇಲೂರುನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಕಸಾಯಿಖಾನೆ ಮೇಲೆ ತಹಸೀಲ್ದಾರ್ ದಾಳಿ

ಈ ಹಿಂದೆಯೂ ದಾಳಿ ನಡೆದಿದ್ದರೂ ದನದ ಮಾಂಸವನ್ನು ಮಾರಾಟ ಮಾಡಲಾಗುತ್ತಿತ್ತು !

ಬೇಲೂರು – ಮುಸ್ತಫಾ ಗಲ್ಲಿಯಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿರುವ ಕಸಾಯಿಖಾನೆ ಮೇಲೆ ತಹಸೀಲ್ದಾರ್ ಎಂ.ಮಮತಾ ಅವರು ಹಠಾತ್ ದಾಳಿ ನಡೆಸಿ 4 ಟನ್ ಗೋಮಾಂಸ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆಯೂ ನಗರಸಭೆಯು ದನದ ಮಾಂಸ ಮಾರಾಟ ಮಾಡುತ್ತಿದ್ದ ಈ ಕಸಾಯಿಖಾನೆ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಿ ಪ್ರಕರಣ ದಾಖಲಿಸಿತ್ತು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಬೇಲೂರಿನಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮಮತಾ ತಿಳಿಸಿದ್ದಾರೆ.

ಸಂಪಾದಕೀಯ ನಿಲುವು

ಸಂಬಂಧಪಟ್ಟವರನ್ನು ಬಂಧಿಸಿ ಕಸಾಯಿಖಾನೆ ಮುಚ್ಚಬಾರದೇಕೆ?