5 ಲಕ್ಷ ಭಕ್ತರು ದರ್ಶನ ಪಡೆದರು

ನವದೆಹಲಿ – ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ಆಗಸ್ಟ್ 19 ರಂದು ಕೊನೆಗೊಂಡಿತು. ಕಳೆದ 52 ದಿನಗಳಿಂದ ಈ ಪ್ರಯಾಣ ನಡೆಯುತ್ತಿತ್ತು. ಈ ಮೂಲಕ 5 ಲಕ್ಷಕ್ಕೂ ಹೆಚ್ಚು ಭಕ್ತರು ಇದರಲ್ಲಿ ಪಾಲ್ಗೊಂಡಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 50 ಸಾವಿರ ಹೆಚ್ಚು ಭಕ್ತರು ಪ್ರಯೋಜನ ಪಡೆದಿದ್ದಾರೆ. ಯಾತ್ರೆಯ ಕೊನೆಯ ದಿನ ಬಾಬಾ ಅಮರನಾಥರ ಪವಿತ್ರ ‘ಛಡಿ ಮುಬಾರಕ್’ ಅಮರನಾಥ ಗುಹೆ ತಲುಪಿತು. ಛಡಿ ಮುಬಾರಕ್ ವೈದಿಕ ಮತ್ರೋಚ್ಚಾರದೊಂದಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು.
ಈ ವರ್ಷ 6 ಲಕ್ಷ ಭಕ್ತರು ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇತ್ತು. ಹೆಚ್ಚಿನ ಜನಸಂದಣಿ ಇರುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ವ್ಯವಸ್ಥೆ ಮಾಡಲಾಗಿತ್ತು. ಮಾರ್ಗದುದ್ದಕ್ಕೂ ಆಹಾರ ಮತ್ತು ಪಾನೀಯ, ಆರೋಗ್ಯ ವ್ಯವಸ್ಥೆ ಸೇರಿದಂತೆ ಇತರ ವ್ಯವಸ್ಥೆಗಳನ್ನು ಮಾಡಲಾಗಿತ್ತು.
ಛಡಿ ಮುಬಾರಕ್ ಎಂದರೇನು?
‘ಛಡಿ ಮುಬಾರಕ’ ಅಂದರೆ ಒಂದು ಪವಿತ್ರ ಬೆಳ್ಳಿ ಕೋಲು. ಅದನ್ನು ಶಿವನ ಸಂಕೇತವೆಂದು ಪರಿಗಣಿಸಲಾಗಿದೆ. ಅದೊಂದು ಧಾರ್ಮಿಕ ಸಂಪ್ರದಾಯವಾಗಿದೆ. ಈ ಬೆಳ್ಳಿಯ ಕೋಲು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಈ ಕೋಲಿಗೆ ಶಿವನ ಅಲೌಕಿಕ ಶಕ್ತಿ ಇದೆ ಎಂದು ನಂಬಲಾಗಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ