
ಮುಂಬಯಿ – ಡಾ. ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಸಿಬಿಐನ ವಿಶೇಷ ನ್ಯಾಯಾಲಯವು ಆರೋಪಿಗಳನ್ನು ನಿರಪರಾಧಿಗಳೆಂದು ಖುಲಾಸೆಗೊಳಿಸಿದೆ ಮತ್ತು ಆರೋಪಿಗಳ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ ಅಡಿಯಲ್ಲಿ ಆರೋಪಿಗಳ ಮೇಲೆ ಹೊರಿಸಿದ್ದ ‘ಭಯೋತ್ಪಾದಕ ಕಾಯಿದೆಗಳು ಮತ್ತು ಕ್ರಿಮಿನಲ್ ಪಿತೂರಿ’ (ಯುಎಪಿಎ) ಕಾಯ್ದೆಯ ಸೆಕ್ಷನ್ಗಳನ್ನು ರದ್ದುಗೊಳಿಸಿತ್ತು. ಇದರ ವಿರುದ್ಧ ಡಾ. ನರೇಂದ್ರ ದಾಭೋಲ್ಕರ್ ಅವರ ಪುತ್ರಿ ಮುಕ್ತಾ ದಾಭೋಲ್ಕರ್ ಅವರು ಮುಂಬಯಿ ಉಚ್ಚನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ.
ನ್ಯಾಯಮೂರ್ತಿ ರೇವತಿ ಮೋಹಿತೆ ಡೆರೆ ಮತ್ತು ನ್ಯಾಯಮೂರ್ತಿ ಪೃಥ್ವಿರಾಜ್ ಚವಾಣ್ ಅವರ ಖಂಡಪೀಠದ ಮುಂದೆ ಆಗಸ್ಟ್ 21 ರಂದು ಪ್ರಾಥಮಿಕ ವಿಚಾರಣೆ ನಡೆಯಿತು. ಈ ಅರ್ಜಿಯ ಮುಂದಿನ ವಿಚಾರಣೆ ಸೆಪ್ಟೆಂಬರ್ 23 ರಂದು ನಡೆಯಲಿದೆ. ಮುಕ್ತಾ ದಾಭೋಲ್ಕರ್ ಅವರು ನ್ಯಾಯವಾದಿ ಅಭಯ್ ನೆವಗಿ ಮೂಲಕ ಈ ಮೇಲ್ಮನವಿ ಸಲ್ಲಿಸಿದ್ದಾರೆ. ಡಾ. ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಡಾ. ವೀರೇಂದ್ರಸಿಂಹ ತಾವಡೆ, ನ್ಯಾಯವಾದಿ ಸಂಜೀವ್ ಪುನಾಳೆಕರ್ ಮತ್ತು ಸನಾತನ ಸಾಧಕ ಶ್ರೀ. ವಿಕ್ರಮ ಭಾವೆ ಅವರನ್ನು ಖುಲಾಸೆಗೊಳಿಸಿದೆ ಹಾಗೂ ಸರ್ವಶ್ರೀ ಸಚಿನ್ ಅಂದುರೆ ಮತ್ತು ಶರದ್ ಕಳಸ್ಕರ್ ಅವರಿಗೆ ಜೀವಾವಧಿಯ ಶಿಕ್ಷೆ ವಿಧಿಸಿದೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!