
ಜೌನ್ಪುರ (ಉತ್ತರ ಪ್ರದೇಶ) – ಅಟಾಲಾ ಮಾತಾ ದೇವಸ್ಥಾನದ ಪ್ರಕರಣವು ಆಗಸ್ಟ್ 21 ರಂದು ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ನ್ಯಾಯಾಲಯವು ಈ ಪ್ರಕರಣದಲ್ಲಿ ಸೆಪ್ಟೆಂಬರ್ 2, 2024 ರಂದು ತೀರ್ಪು ನೀಡಲಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಮೊದಲ ಮಹಾನಿರ್ದೇಶಕ ಅಲೆಕ್ಸಾಂಡರ್ ಕನ್ನಿಂಗ್ಹ್ಯಾಮ್ ಅವರು ತಮ್ಮ ವರದಿಯಲ್ಲಿ ಅಟಾಲಾ ಮಸೀದಿಯ ವರ್ಣನೆಯನ್ನು ‘ಅಟಾಲಾ ದೇವಿ ದೇವಾಲಯ’ ಹೀಗೆ ಹೇಳಿದ್ದಾರೆ ಎಂದು ಹಿಂದೂ ಪಕ್ಷದ ನ್ಯಾಯವಾದಿಗಳು ನ್ಯಾಯಾಲಯದಲ್ಲಿ ತಿಳಿಸಿದರು.
ಕನೌಜ್ ರಾಜ ಜಯಚಂದ್ ರಾಥೋಡ್ ರವರು ಅಟಾಲಾ ದೇವಿ ದೇವಾಲಯವನ್ನು ನಿರ್ಮಿಸಿದ್ದರು. ಬ್ರಿಟಿಷ್ ಅಧಿಕಾರಿ ಜೆ.ಪಿ. ಹೆವಿಟ್ ಮತ್ತು ಇಬಿ ಹೋವೆಲ್ ಅವರು ಅಟಾಲಾ ಮಸೀದಿಯ ಕುಶಲತೆಯನ್ನು ‘ಹಿಂದೂ ಕಲೆಗಾರಿಕೆ’ ಎಂದು ಬಣ್ಣಿಸಿದ್ದಾರೆ. ಭಾರತೀಯ ಪುರಾತತ್ವ ಸರ್ವೇಕ್ಷಣಾದ ವರದಿಯಲ್ಲಿ ಅಟಾಲಾ ದೇವಿ ದೇವಸ್ಥಾನದ ಅನೇಕ ಛಾಯಾಚಿತ್ರಗಳನ್ನು ನೀಡಿದ್ದಾರೆ. ಅದರಲ್ಲಿ ಶಂಖ, ತ್ರಿಶೂಲ, ಕಮಲ ಇತ್ಯಾದಿ ಹಿಂದೂ ಚಿಹ್ನೆಗಳ ಸಮಾವೇಶ ಇದೆ. ಹಿಂದೂ ಪಕ್ಷದ ನ್ಯಾಯವಾದಿ, ಅಟಾಲಾ ಮಸೀದಿಯು ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಅಡಿಯಲ್ಲಿ ‘ಸಂರಕ್ಷಿತ ಸ್ಮಾರಕ’ ಇದೆ. ಆದ್ದರಿಂದ ಈ ಪ್ರಕರಣದಲ್ಲಿ ‘ಪ್ರಾರ್ಥನಾ ಸ್ಥಳಗಳ ಕಾಯಿದೆ,1991’ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ