ಆರೋಪಿಗಳನ್ನು ಬಂಧಿಸುವಂತೆ ಶಿವಭಕ್ತರ ಆಗ್ರಹ

ಕೋಟಾ(ರಾಜಸ್ಥಾನ) – ಜಿಲ್ಲೆಯ ರಾಮಗಂಜಮಂಡಿಯ ಸರಕಾರಿ ವಿಹಿರ್ ಚೌಕ್ನಲ್ಲಿರುವ ಶಿವ ಮಂದಿರವೊಂದರಲ್ಲಿ ಆಗಸ್ಟ್ 27 ರಂದು ಮುರಿದ ಶಿವಲಿಂಗ ಪತ್ತೆಯಾಗಿದೆ. ದೇವಸ್ಥಾನದಲ್ಲಿ ನಡೆದ ಈ ಘಟನೆಯಿಂದ ಶಿವಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಿವಭಕ್ತರು ಹಾಗೂ ಹಿಂದೂ ಸಂಘಟನೆಗಳು ಒತ್ತಾಯಿಸಿವೆ. (ದೇಗುಲದಲ್ಲಿ ಶಿವಲಿಂಗ ವಿಧ್ವಂಸಕ ಕೃತ್ಯ ನಡೆಸಿರುವುದು ಪೊಲೀಸರಿಗೆ ಮತ್ತು ಆಡಳಿತಕ್ಕೆ ನಾಚಿಕೆಗೇಡು! – ಸಂಪಾದಕರು).
ರಾಮಗಂಜಮಂಡಿ ನಗರ ಮುಚ್ಚುವ ಎಚ್ಚರಿಕೆ!
ಆರೋಪಿಗಳನ್ನು ಶೀಘ್ರವೇ ಹಿಡಿಯದಿದ್ದರೆ ರಾಮಗಂಜಮಂಡಿ ನಗರ ಬಂದ್ ಮಾಡಲಾಗುವುದು ಎಂದು ಆಕ್ರೋಶಗೊಂಡ ಹಿಂದೂಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಘಟನೆಯ ನಂತರ ಶಿವಭಕ್ತರು ಹಾಗೂ ಹಿಂದೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ನರೇಂದ್ರ ಪರೀಕ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಪೊಲೀಸ್ ಇಲಾಖೆ ಆರೋಪಿಯನ್ನು ಹಿಡಿದು ಕಠಿಣ ಶಿಕ್ಷೆ ನೀಡುವುದು, ಅಲ್ಲಿಯವರೆಗೆ ಈ ಪ್ರತಿಭಟನೆ ಹಿಂಪಡೆಯಬೇಕೆಂದು ಅವರು ಮನವಿ ಮಾಡಿದರು.
| ಈ ಮೇಲೆ ತೋರಿಸಿರುವ ಚಿತ್ರ ಯಾರ ಧಾರ್ಮಿಕ ಭಾವನೆಗಳಿಗೆ ನೋವನ್ನು ಉಂಟು ಮಾಡುವುದಾಗಿರದೇ ನಿಜ ಸ್ಥಿತಿ ತಿಳಿಸುವುದಾಗಿದೆ – ಸಂಪಾದಕರು |
ಸಂಪಾದಕೀಯ ನಿಲುವುರಾಜಸ್ಥಾನದಲ್ಲಿ ಭಾಜಪ ಸರಕಾರವಿರುವಾಗ ಹಿಂದೂ ದೇವಾಲಯಗಳ ಮೇಲೆ ಇಂತಹ ದಾಳಿಯನ್ನು ಹಿಂದೂಗಳು ನಿರೀಕ್ಷಿಸುವುದಿಲ್ಲ ! ಈ ಹಿಂದೂ ದ್ವೇಷಿಗಳನ್ನು ಸರಕಾರ ಹದ್ದುಬಸ್ತಿನಲ್ಲಿಡಬೇಕು ! |
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ