|

ಮುಂಬಯಿ – ವಾಹನದ ‘ಹೆಡ್ಲೈಟ್’ನ (ಎದುರಿನ ದೀಪ) ಬೆಳಕು ಹೇಗಿರಬೇಕು ? ಈ ವಿಷಯದ ಕುರಿತು ‘ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989’ ಅಡಿಯಲ್ಲಿ ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ; ಆದರೆ ಇದನ್ನು ನಿರ್ಲಕ್ಷಿಸಿ ಕೆಲವು ವಾಹನ ಚಾಲಕರು ವಾಹನಗಳ ಹೆಡ್ ಲೈಟ್ ಗಳಲ್ಲಿ ಕಣ್ಣುಗಳಿಗೆ ತೊಂದರೆಯಾಗುವಂತಹ ದೀಪಗಳನ್ನು ಅಳವಡಿಸುತ್ತಾರೆ. ಅದರಲ್ಲಿನ ತೊಂದರೆದಾಯಕ ಪ್ರಕಾಶಗಳಿಂದ ಅಪಘಾತಗಳಾಗಿರುವ ಅನೇಕ ಘಟನೆಗಳು ರಾಜ್ಯದಲ್ಲಿ ನಡೆದಿವೆ. ಕೆಲವರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ‘ಸುರಾಜ್ಯ ಅಭಿಯಾನ’ ಇದರ ಗಂಭೀರತೆಯನ್ನು ಗಮನಿಸಿ ರಾಜ್ಯ ಸಾರಿಗೆ ಆಯುಕ್ತರಿಗೆ ದೂರು ನೀಡಿತ್ತು. ಇದನ್ನು ಸಾರಿಗೆ ಇಲಾಖೆಯು ಗಂಭೀರವಾಗಿ ಪರಿಗಣಿಸಿ ಆಗಸ್ಟ್ 23 ರಂದು ಸಾರಿಗೆ ಆಯುಕ್ತರು ರಾಜ್ಯದ ಎಲ್ಲಾ ಪ್ರಾದೇಶಿಕ ಮತ್ತು ಉಪ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಈ ಪ್ರಕರಣದ ಬಗ್ಗೆ ಕ್ರಮ ಕೈಗೊಂಡು ವರದಿಯನ್ನು ಸಲ್ಲಿಸುವಂತೆ ಆದೇಶ ನೀಡಿದೆ. ಹಾಗೆಯೇ ಹೆಡ್ ಲೈಟ್ ನ ನಿಯಮವನ್ನು ಉಲ್ಲಂಘಿಸುವ ವಾಹನಗಳನ್ನು ಪರಿಶೀಲಿಸಿ ತಪ್ಪಿತಸ್ಥ ವಾಹನ ಚಾಲಕರ ಮೇಲೆ ಸೂಕ್ತ ಕ್ರಮ ಕೈಕೊಳ್ಳಬೇಕು. ಹಾಗೆಯೇ ಈ ವಿಷಯದಲ್ಲಿ ಜನಜಾಗೃತಿ ಮೂಡಿಸಬೇಕು ಎಂದೂ ಸಾರಿಗೆ ಆಯುಕ್ತರು ರಾಜ್ಯದ ಎಲ್ಲಾ ಪ್ರಾದೇಶಿಕ ಮತ್ತು ಉಪ ಪ್ರಾದೇಶಿಕ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ ಎಂದು ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ದ ಮಹಾರಾಷ್ಟ್ರ ರಾಜ್ಯ ಸಂಯೋಜಕರಾದ ಶ್ರೀ. ಅಭಿಷೇಕ ಮುರುಕಟೆಯವರು ಮಾಹಿತಿ ನೀಡಿದ್ದಾರೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ