|

ಮುಂಬಯಿ – ವಾಹನದ ‘ಹೆಡ್ಲೈಟ್’ನ (ಎದುರಿನ ದೀಪ) ಬೆಳಕು ಹೇಗಿರಬೇಕು ? ಈ ವಿಷಯದ ಕುರಿತು ‘ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989’ ಅಡಿಯಲ್ಲಿ ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ; ಆದರೆ ಇದನ್ನು ನಿರ್ಲಕ್ಷಿಸಿ ಕೆಲವು ವಾಹನ ಚಾಲಕರು ವಾಹನಗಳ ಹೆಡ್ ಲೈಟ್ ಗಳಲ್ಲಿ ಕಣ್ಣುಗಳಿಗೆ ತೊಂದರೆಯಾಗುವಂತಹ ದೀಪಗಳನ್ನು ಅಳವಡಿಸುತ್ತಾರೆ. ಅದರಲ್ಲಿನ ತೊಂದರೆದಾಯಕ ಪ್ರಕಾಶಗಳಿಂದ ಅಪಘಾತಗಳಾಗಿರುವ ಅನೇಕ ಘಟನೆಗಳು ರಾಜ್ಯದಲ್ಲಿ ನಡೆದಿವೆ. ಕೆಲವರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ‘ಸುರಾಜ್ಯ ಅಭಿಯಾನ’ ಇದರ ಗಂಭೀರತೆಯನ್ನು ಗಮನಿಸಿ ರಾಜ್ಯ ಸಾರಿಗೆ ಆಯುಕ್ತರಿಗೆ ದೂರು ನೀಡಿತ್ತು. ಇದನ್ನು ಸಾರಿಗೆ ಇಲಾಖೆಯು ಗಂಭೀರವಾಗಿ ಪರಿಗಣಿಸಿ ಆಗಸ್ಟ್ 23 ರಂದು ಸಾರಿಗೆ ಆಯುಕ್ತರು ರಾಜ್ಯದ ಎಲ್ಲಾ ಪ್ರಾದೇಶಿಕ ಮತ್ತು ಉಪ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಈ ಪ್ರಕರಣದ ಬಗ್ಗೆ ಕ್ರಮ ಕೈಗೊಂಡು ವರದಿಯನ್ನು ಸಲ್ಲಿಸುವಂತೆ ಆದೇಶ ನೀಡಿದೆ. ಹಾಗೆಯೇ ಹೆಡ್ ಲೈಟ್ ನ ನಿಯಮವನ್ನು ಉಲ್ಲಂಘಿಸುವ ವಾಹನಗಳನ್ನು ಪರಿಶೀಲಿಸಿ ತಪ್ಪಿತಸ್ಥ ವಾಹನ ಚಾಲಕರ ಮೇಲೆ ಸೂಕ್ತ ಕ್ರಮ ಕೈಕೊಳ್ಳಬೇಕು. ಹಾಗೆಯೇ ಈ ವಿಷಯದಲ್ಲಿ ಜನಜಾಗೃತಿ ಮೂಡಿಸಬೇಕು ಎಂದೂ ಸಾರಿಗೆ ಆಯುಕ್ತರು ರಾಜ್ಯದ ಎಲ್ಲಾ ಪ್ರಾದೇಶಿಕ ಮತ್ತು ಉಪ ಪ್ರಾದೇಶಿಕ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ ಎಂದು ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ದ ಮಹಾರಾಷ್ಟ್ರ ರಾಜ್ಯ ಸಂಯೋಜಕರಾದ ಶ್ರೀ. ಅಭಿಷೇಕ ಮುರುಕಟೆಯವರು ಮಾಹಿತಿ ನೀಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ