
ಬೆಂಗಳೂರು: ಜೆಪಿ ನಗರದ ‘ಪ್ರಸನ್ನ ಜ್ಯೋತಿ’ ಹೋಂ ಫಾರ್ ಹೋಂ ಲೆಸ್ ಗರ್ಲ್ಸ್ ಆಶ್ರಮದ ಹೆಣ್ಣು ಮಕ್ಕಳಿಗೆ ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿ ವತಿಯಿಂದ ‘ಸಮಾಜ ಸಹಾಯ’ ಅಭಿಯಾನದ ಅಡಿಯಲ್ಲಿ ಸಂಸ್ಕಾರ ನೋಟ್ ಬುಕ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯ ಕಾರ್ಯಕರ್ತರಾದ ಸೌ. ಕೋಮಲ ಕಾಶಿ ಇವರು ಮಕ್ಕಳಿಗೆ ಸಂಸ್ಕಾರ ವಹಿಗಳ ಮಹತ್ವ ಮತ್ತು ಉದ್ದೇಶಗಳ ಬಗ್ಗೆ ತಿಳಿಸಿದರು ಹಾಗೂ ರಾಷ್ಟ್ರ ಪ್ರೇಮದ ವಿಷಯ, ಸನಾತನ ಧರ್ಮದ ಸಂಸ್ಕಾರಗಳ ಬಗ್ಗೆ ಮಾಹಿತಿ ನೀಡಿದರು. ಭಗವಂತನ ನಾಮಜಪ ಮಾಡುವುದರಿಂದ ಓದಿನಲ್ಲಿ ಏಕಾಗ್ರತೆ ಹೆಚ್ಚುತ್ತದೆ. ಇನ್ನೂ ಹಲವಾರು ವಿಷಯಗಳನ್ನು ಮಕ್ಕಳಿಗೆ ತಿಳಿಸಿದರು. ಈ ವೇಳೆ ಸಮಿತಿಯ ಕಾರ್ಯಕರ್ತರಾದ ಸೌ. ಪಲ್ಲವಿ, ಸೌ. ಪುಣ್ಯವತಿ ಹಾಗೂ ಆಶ್ರಮದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !