
ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಭದ್ರತೆಯು ಬಾಂಗ್ಲಾದೇಶದ ಆಂತರಿಕ ವಿಷಯವಾಗಿದೆ. ಹಿಂದೂಗಳ ಮೇಲಿನ ದಾಳಿಯ ವರದಿಗಳು ಸುಳ್ಳು; ಏಕೆಂದರೆ ಬಹುತೇಕ ಘಟನೆಗಳು ರಾಜಕೀಯ ಉದ್ದೇಶದಿಂದ ಕೂಡಿತ್ತು ಎಂದು ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿಯ ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಇಸ್ಲಾಂ ಅಲಮಗೀರ್ ಅವರು ಸುಳ್ಳು ಹೇಳಿಕೆ ನೀಡಿದ್ದಾರೆ. ಅವರು ತಮ್ಮ ಮಾತನ್ನು ಮುಂದುವರಿಸಿ, ಭಾರತ ಮತ್ತು ಬಾಂಗ್ಲಾದೇಶದ ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಹಸ್ತಾಂತರ ಅಗತ್ಯ ಎಂದು ಹೇಳಿದರು. ಹೀಗೆ ನಡೆದರೆ ಇದು ಬಾಂಗ್ಲಾದೇಶದ ಜನರ ಭಾವನೆಗಳನ್ನು ಗೌರವಿಸಿದಂತಾಗುತ್ತದೆ ಎಂದು ಹೇಳಿದರು. (ಹಿಂದೂಗಳ ಧಾರ್ಮಿಕ ಭಾವನೆಗಳ ಬಗ್ಗೆ ಅಲಮಗೀರ್ ಏಕೆ ಏನನ್ನೂ ಹೇಳುವುದಿಲ್ಲ ? – ಸಂಪಾದಕರು) ಹಸೀನಾ ಭಾರತದಲ್ಲಿ ಉಳಿದರೆ, ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹದಗೆಡಬಹುದು ಎಂದೂ ಸಹ ಹೇಳಿದರು.
‘Reports of attacks on Hindus are incorrect’ – Bangladesh’s Opposition Party BNP’s Secretary General Mirza Islam Alamgir
He also remarked that if India fails to extradite Sheikh Hasina to Bangladesh, it could jeopardise bilateral relations.
It’s no surprise to see the… pic.twitter.com/AWQEO77F0l
— Sanatan Prabhat (@SanatanPrabhat) August 31, 2024
1. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ, ಅವಾಮಿ ಲೀಗ್ ಸರಕಾರದ ಅವಧಿಯಲ್ಲಿನ ವಿವಾದಾತ್ಮಕ ಅದಾನಿ ವಿದ್ಯುತ್ ಒಪ್ಪಂದದ ಬಗ್ಗೆ ತನಿಖೆ ನಡೆಸಲಾಗುವುದು; ಏಕೆಂದರೆ ಇದರಿಂದ ಬಾಂಗ್ಲಾದೇಶದ ಜನರಿಗೆ ತೊಂದರೆಯಾಗುತ್ತಿದೆ.
2. ಅವರು ತಮ್ಮ ಮಾತನ್ನು ಮುಂದುವರಿಸಿ ಹಿಂದಿನ ಭಿನ್ನಾಭಿಪ್ರಾಯಗಳನ್ನು ಮರೆತು ಸಹಕರಿಸಲು ನಮ್ಮ ಪಕ್ಷ ಸಿದ್ಧವಿದೆ. ಬಾಂಗ್ಲಾದೇಶದಿಂದಾಗಿ ಭಾರತದ ಭದ್ರತೆಗೆ ಧಕ್ಕೆ ತರುವ ಯಾವುದನ್ನೂ ನಾವು ಅನುಮತಿಸುವುದಿಲ್ಲ ಎಂದು ಹೇಳಿದರು.
ಸಂಪಾದಕೀಯ ನಿಲುವು
|
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!