ಜಮ್ಮು- ಕಾಶ್ಮೀರ : ಜಿಹಾದಿ ಭಯೋತ್ಪಾದಕರ ಗುಂಡಿನ ದಾಳಿಗೆ ಒಬ್ಬ ಯೋಧ ಹುತಾತ್ಮ !

ಶ್ರೀನಗರ (ಜಮ್ಮು- ಕಾಶ್ಮೀರ) – ಸೆಪ್ಟೆಂಬರ್ 2 ರಂದು ಬೆಳಿಗ್ಗೆ, ಜಮ್ಮು- ಕಾಶ್ಮೀರದ ಸುಜ್ವಾನ್ ಸೇನಾ ಠಾಣೆಯ ಮೇಲೆ ಜಿಹಾದಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದಾರೆ. ಸೇನಾ ಠಾಣೆಯ ಹೊರಗೆ ಅಡಗಿ ಕುಳಿತುಕೊಂಡಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಯ ವೇಳೆ ಅವರು ಮೃತಪಟ್ಟಿದ್ದಾರೆ.

ಭಯೋತ್ಪಾದಕರನ್ನು ಹುಡುಕಲು ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಪ್ರದೇಶದಲ್ಲಿ ಡ್ರೋನ್‌ಗಳ ಮೂಲಕವೂ ಶೋಧ ಕಾರ್ಯ ನಡೆಸಲಾಗುತ್ತಿದೆ.

ಸಂಪಾದಕೀಯ ನಿಲುವು

ಇಂತಹ ಭಯೋತ್ಪಾದಕ ದಾಳಿಗಳು ಅಂದರೆ ಭಾರತದ ವಿರುದ್ಧ ಪಾಕಿಸ್ತಾನ ಮಾಡುತ್ತಿರುವ ‘ಜಿಹಾದ್’ ಇದೆ. ಈಗ ಜಿಹಾದಿ ಪಾಕಿಸ್ತಾನವನ್ನು ನಾಶ ಮಾಡುವುದೊಂದೇ ಏಕೈಕ ಪರಿಹಾರವಾಗಿದೆ !