|

ಉತ್ತರ 24 ಪರಗಣಾ (ಬಂಗಾಳ) – ಕೋಲಕಾತಾದ ರಾಧಾ ಗೋಬಿಂದ ಕರ (ಆರ್.ಜಿ. ಕರ್) ವೈದ್ಯಕೀಯ ವಿಶ್ವವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಮೇಲೆ ಬಲಾತ್ಕಾರ ಮಾಡಿ ಅವಳ ಹತ್ಯೆ ಮಾಡಿದ ಘಟನೆಯ ನಂತರ ಬೀರಭೂಮನಲ್ಲಿ ಆಸ್ಪತ್ರೆಗೆ ದಾಖಲಾದ ಅಬ್ಬಾಸುದ್ದೀನ್ ಹೆಸರಿನ ರೋಗಿಯು ಓರ್ವ ನರ್ಸ್ ಮೇಲೆ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಇದಾದ ನಂತರ ಹೌರಾ ಆಸ್ಪತ್ರೆಯಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಈಗ ಉತ್ತರ 24 ಪರಗಣದಲ್ಲಿ 7 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ರೋಹಾಂಡಾ ಪಂಚಾಯತಿಯ ರಾಜಭರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ನಂತರ, ಆಕ್ರೋಶಗೊಂಡ ಜನರು ಆರೋಪಿಯ ಮನೆಯ ಮೇಲೆ ದಾಳಿ ಮಾಡಿದರು ಮತ್ತು ಅವರ ಸಂಬಂಧಿಕರ ಅಂಗಡಿಗಳನ್ನು ಧ್ವಂಸಗೊಳಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸಂತ್ರಸ್ತೆಯ ತಂದೆ ಮಾತನಾಡಿ, ಅವರ ಮಗಳು ಅಂಗಡಿಯಿಂದ ಮರಳುತ್ತಿರುವಾಗ ಆರೋಪಿಯು ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿಸಿದ್ದಾರೆ. ಆರೋಪಿ ಅದೇ ಗ್ರಾಮದ ನಿವಾಸಿಯಾಗಿದ್ದಾನೆ. ಅವನಿಗೆ ಕಠಿಣಶಿಕ್ಷೆಯಾಗಬೇಕು ಎಂದು ಸಂತ್ರಸ್ಥೆಯ ಕುಟುಂಬದವರು ಒತ್ತಾಯಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ನಾಯಕನಿಂದ ಈ ಪ್ರಕರಣವನ್ನು `ರಾಜಿ’ ಮಾಡಿ ಮುಚ್ಚಿಹಾಕುವ ಪ್ರಯತ್ನ !
ವಿಶೇಷವೆಂದರೆ ತೃಣಮೂಲ ಕಾಂಗ್ರೆಸ್ನ ಸ್ಥಳೀಯ ಮುಖಂಡನು ಈ ಪ್ರಕರಣವನ್ನು ರಾಜಿ ಮಾಡಿ ಮುಚ್ಚಿಹಾಕುವಂತೆ ಕರೆ ನೀಡಿದನು. ಆದರೆ ಸ್ಥಳೀಯ ಜನರು ಆ ಮುಖಂಡನ ಮನೆಯನ್ನೂ ಗುರಿ ಮಾಡಿದರು. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು. ತದನಂತರ ಇಲ್ಲಿ ಕ್ಷಿಪ್ರ ಕಾರ್ಯ ಪಡೆಯನ್ನು ನಿಯೋಜಿಸಲಾಗಿದೆ.
ಸಂಪಾದಕೀಯ ನಿಲುವು‘ಜನರು ಕಾನೂನನ್ನು ಕೈಗೆತ್ತಿಕೊಳ್ಳಬಾರದು’, ಎಂದು ಸಲಹೆಗಳನ್ನು ನೀಡುತ್ತಾರೆ; ಆದರೆ ಜನರಿಗೆ ಇಂತಹ ಕೃತ್ಯಗಳನ್ನು ಮಾಡಬೇಕೆಂದು ಏಕೆ ಅನಿಸುತ್ತದೆ? ಎನ್ನುವುದನ್ನು ವಿಚಾರ ಮಾಡುವುದೂ ಆವಶ್ಯಕವಾಗಿದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !