ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ ಮಾಡಿದ ಹಿಂದೂ ಮುಖಂಡ ಪುನಿತ್ ಕೆರೆಹಳ್ಳಿ !

ಚಾಲಕ ಮನ್ಸೂರ್ ಅಹಮದ್ ಬಂಧನ

ಬೆಂಗಳೂರು – ಮದ್ದೂರಿನಿಂದ ಬೆಂಗಳೂರಿನ ಕಸಾಯಿಖಾನೆಗೆ ಅಕ್ರಮವಾಗಿ ಒಯ್ಯುತ್ತಿದ್ದ 30ಕ್ಕೂ ಹೆಚ್ಚು ಹಸುಗಳನ್ನು ಹಿಂದೂ ಮುಖಂಡ ಪುನಿತ್ ಕೆರೆಹಳ್ಳಿ ಮತ್ತು ಅವರ ಸಂಗಡಿಗರು ತಡೆಯುವ ಮೂಲಕ ಗೋವುಗಳನ್ನು ರಕ್ಷಿಸಿದ್ದಾರೆ. ಇದರ ಬಗ್ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಒಂದು ಐಚರ್ ವಾಹನದಲ್ಲಿ 30ಕ್ಕೂ ಹೆಚ್ಚು ಹಸುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು. ಇದರ ಮಾಹಿತಿ ಸಿಕ್ಕ ನಂತರ ಪುನಿತ್ ಕೆರೆಹಳ್ಳಿ ಹಾಗೂ ಸಂಗಡಿಗರು ಮದ್ದೂರಿನಲ್ಲಿ ವಾಹನ ನಿಲ್ಲಿಸಿ ಪರಿಶೀಲಿಸಿದರು. ನಂತರ ಪುನೀತ್ ಕೆರೆಹಳ್ಳಿ ಮದ್ದೂರು ಪೊಲೀಸ್ ಠಾಣೆಯಲ್ಲಿ ಅಕ್ರಮ ಗೋವು ಸಾಗಾಟದ ಬಗ್ಗೆ ದೂರು ದಾಖಲಿಸಿದರು. ಈ ದೂರಿನ ಆಧಾರದ ಮೇಲೆ ಪೊಲೀಸರು ವಾಹನಚಾಲಕ ಮನ್ಸೂರ್ ಅಹಮದ್ ನನ್ನು ಬಂಧಿಸಿದರು.