ಜಮ್ಮು- ಕಾಶ್ಮೀರದಲ್ಲಿ ನುಸುಳುತ್ತಿದ್ದ ಇಬ್ಬರು ಭಯೋತ್ಪಾದಕರ ಹತ್ಯೆ

ಶ್ರೀನಗರ – ಸೆಪ್ಟೆಂಬರ್ 8 ರ ರಾತ್ರಿ ನೌಶೇರಾದಲ್ಲಿ ಭಯೋತ್ಪಾದಕರ ನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದಾರೆ. ಈ ವೇಳೆ ನಡೆದ ಚಕಮಕಿಯಲ್ಲಿ ಸೇನೆಯು 2 ಉಗ್ರರನ್ನು ಹತ್ಯೆ ಮಾಡಿದೆ. ಈ ವೇಳೆ ಉಗ್ರರಿಂದ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ. ಕಳೆದ ವಾರದಲ್ಲಿ ನಡೆದ ಇದು ಎರಡನೇ ಎನ್‌ಕೌಂಟರ್ ಆಗಿದೆ. ಸೆಪ್ಟೆಂಬರ್ 2 ರಂದು ಜಮ್ಮು- ಕಾಶ್ಮೀರದಲ್ಲಿ ಸೇನೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರಲ್ಲಿ ಓರ್ವ ಯೋಧ ವೀರಮರಣ ಹೊಂದಿದ್ದರು.