
ನವದೆಹಲಿ : ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 25 ರವರೆಗೆ ವಿಸ್ತರಿಸಲಾಗಿದೆ. ಸೆಪ್ಟೆಂಬರ್ 11 ರಂದು ನಡೆದ ವಿಚಾರಣೆಯಲ್ಲಿ ಕೇಜ್ರಿವಾಲ್ ಅವರು ‘ವೀಡಿಯೋ ಕಾನ್ಫರೆನ್ಸಿಂಗ್’ ಮೂಲಕ ಹಾಜರಾಗಿದ್ದರು. ಇದೇ ಪ್ರಕರಣದಲ್ಲಿ ಆರೋಪಿ ಹಾಗೂ ಎಎಪಿ ಶಾಸಕ ದುರ್ಗೇಶ್ ಪಾಠಕ್ ಅವರಿಗೆ ನ್ಯಾಯಾಲಯ 1 ಲಕ್ಷ ರೂಪಾಯಿ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ. ಪೂರಕ ಆರೋಪಪಟ್ಟಿಯನ್ನು ಸಲ್ಲಿಸಿದ ನಂತರ ಅವರು ಕೇಂದ್ರೀಯ ತನಿಖಾ ದಳದ (ಸಿಬಿಐ) ಸಮನ್ಸ್ ಪ್ರಕಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅರವಿಂದ್ ಕೇಜ್ರಿವಾಲ್, ದುರ್ಗೇಶ್ ಪಾಠಕ್, ವಿನೋದ್ ಚೌಹಾಣ್, ಆಶಿಶ್ ಮಾಥುರ್ ಮತ್ತು ಶರತ್ ರೆಡ್ಡಿ ವಿರುದ್ಧ ಸಿಬಿಐ ರೋಸ್ ವೆನ್ಯೂ ಕೋರ್ಟ್ಗೆ ಪೂರಕ ಆರೋಪಪಟ್ಟಿ ಸಲ್ಲಿಸಿತ್ತು. ನ್ಯಾಯಾಲಯವು ಸೆಪ್ಟೆಂಬರ್ 3 ರಂದು ಚಾರ್ಜ್ ಶೀಟ್ ಅನ್ನು ಗಮನಿಸಿತು. ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿ ಸೆಪ್ಟೆಂಬರ್ 11 ರೊಳಗೆ ತಮ್ಮ ಹೇಳಿಕೆಯನ್ನು ಸಲ್ಲಿಸುವಂತೆ ನ್ಯಾಯಾಲಯ ತಿಳಿಸಿತ್ತು. ಹೇಳಿಕೆ ದಾಖಲಿಸಿಕೊಂಡ ನ್ಯಾಯಾಲಯ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ದುರ್ಗೇಶ್ ಪಾಠಕ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಮದ್ಯ ನೀತಿ ಹಗರಣದ ಪ್ರಮುಖ ಸೂತ್ರದಾರದಲ್ಲಿ ಕೇಜ್ರಿವಾಲ್ ಒಬ್ಬರು ! – ಸಿಬಿಐ
ಈ ಹಿಂದೆ ಸಿಬಿಐ ನಾಲ್ಕನೇ ಪೂರಕ ಚಾರ್ಜ್ ಶೀಟ್ ಅನ್ನು ಜುಲೈ 30 ರಂದು ಸಲ್ಲಿಸಿತ್ತು. ಅದರಲ್ಲಿಕೇಜ್ರಿವಾಲ್ ಅವರು ಆರೋಪಿ ಎಂದು ಹೇಳಲಾಗಿತ್ತು. ಮದ್ಯ ನೀತಿ ಹಗರಣದ ಮಾಸ್ಟರ್ ಮೈಂಡ್ ಗಳಲ್ಲಿ ಕೇಜ್ರಿವಾಲ್ ಕೂಡ ಒಬ್ಬರು ಎಂದು ಸಿಬಿಐ ಆರೋಪಿಸಿದೆ. ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಆಗಸ್ಟ್ 23 ರಂದು ಸಿಬಿಐ ರೂಸ್ ಅವೆನ್ಯೂ ನ್ಯಾಯಾಲಯದಿಂದ ಅನುಮತಿ ಪಡೆದಿತ್ತು. ಈ ಪ್ರಕರಣದಲ್ಲಿ ಸಿಬಿಐ ಸೆಪ್ಟೆಂಬರ್ 7 ರಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಐದನೇ ಮತ್ತು ಅಂತಿಮ ಚಾರ್ಜ್ ಶೀಟ್ ಸಲ್ಲಿಸಿತು.
ಸಂಪಾದಕೀಯ ನಿಲುವು
|
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!