
ವಾರಣಾಸಿ – ಜ್ಞಾನವಾಪಿ ಪ್ರದೇಶದಲ್ಲಿನ ವ್ಯಾಸ್ಜಿ ನೆಲಮಾಳಿಗೆಯ ಮೇಲ್ಛಾವಣಿಯ ಮೇಲೆ ನಮಾಜ್ ಮಾಡುವುದಕ್ಕಾಗಿ ಬರುವ ಮುಸ್ಲಿಮರ ಪ್ರವೇಶವನ್ನು ನಿಲ್ಲಿಸಬೇಕು ಮತ್ತು ನೆಲಮಾಳಿಗೆ ರಿಪೇರಿ ಮಾಡಲು ಹಿಂದೂಗಳು ಸಲ್ಲಿಸಿದ್ದ ಮನವಿಯನ್ನು ವಾರಣಾಸಿಯ ಕಿರಿಯ ನ್ಯಾಯಾಲಯವು (ಸಿವಿಲ್ ಕೋರ್ಟ್) ತಿರಸ್ಕರಿಸಿದೆ. ಜ್ಞಾನವಾಪಿಯ ನೆಲಮಾಳಿಗೆಯಲ್ಲಿ ನಡೆಯುತ್ತಿರುವ ಪೂಜೆ ಎಂದಿನಂತೆ ಮುಂದುವರಿಯಲಿದೆ ಎಂದು ನ್ಯಾಯಾಲಯ ಹೇಳಿದೆ. ಹಿಂದೂಗಳ ಅರ್ಜಿಯ ವಿಚಾರಣೆ ವೇಳೆ, ನ್ಯಾಯಮೂರ್ತಿ ಹಿತೇಶ್ ಅಗರ್ವಾಲ್ ಅವರು ಮುಸಲ್ಮಾನರ ಕಡೆಯಿಂದ ಎತ್ತಿರುವ ಆಕ್ಷೇಪಣೆ ಮತ್ತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಸವಾಲು ಅರ್ಜಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಣಯವನ್ನು ನೀಡಿದ್ದಾರೆ.
ಜ್ಞಾನವಾಪಿ ಸಂಕುಲದ ಧಾರ್ಮಿಕ ವಿವಾದದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವದ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ. ಈ ವಿಚಾರವಾಗಿ ಹಿಂದೂ – ಮುಸಲ್ಮಾನರ ಪಕ್ಷಗಳ ನಡುವೆ ದೀರ್ಘಕಾಲದಿಂದ ಕಾನೂನು ಹೋರಾಟ ನಡೆಯುತ್ತಿದೆ. ಈಗ ಹಿಂದೂ ಪಕ್ಷವು ನೆಲಮಾಳಿಗೆಯ ದುರಸ್ತಿ ಕುರಿತು ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ