ಮುಖ್ಯಮಂತ್ರಿ ಕಚೇರಿಗೆ ಹೋಗಬಾರದು ಮತ್ತು ದಾಖಲೆಗಳ ಮೇಲೆ ಸಹಿ ಮಾಡದಂತೆ ಷರತ್ತು

ನವ ದೆಹಲಿ – ಮದ್ಯ ಹಗರಣದ ಪ್ರಕರಣದಲ್ಲಿ ಕಳೆದ 177 ದಿನಗಳಿಂದ ಬಂಧನದಲ್ಲಿದ್ದ ಆಮ್ ಆದ್ಮಿ ಪಕ್ಷದ ಮುಖ್ಯ ನಾಯಕ ಮತ್ತು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸೆಪ್ಟೆಂಬರ್ 13 ರಂದು 10 ಲಕ್ಷ ರೂಪಾಯಿಗಳ ವೈಯಕ್ತಿಕ ಮುಚ್ಚಳಿಕೆ ಪತ್ರದ (ಬಾಂಡ್)ಮೇಲೆ ಸರ್ವೋಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಮದ್ಯದ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (‘ಇಡಿ’) ಬಂಧಿಸಿತ್ತು. ಈ ಹಿಂದೆ, ಕೇಜ್ರಿವಾಲ್ ಅವರ ಬಂಧನವನ್ನು ಸರ್ವೋಚ್ಚ ನ್ಯಾಯಾಲಯವು ಕಾನೂನುಬಾಹಿರ ಎಂದು ಪರಿಗಣಿಸಿರಲಿಲ್ಲ; ಆದರೆ ‘ಈಗ ಯಾವುದೇ ನಾಯಕನನ್ನು ಹೆಚ್ಚು ಕಾಲ ಜೈಲಿನಲ್ಲಿ ಇಡುವಂತಿಲ್ಲ’ ಎಂದು ನ್ಯಾಯಾಲಯವು ಹೇಳಿದೆ.
ಸರ್ವೋಚ್ಚ ನ್ಯಾಯಾಲಯವು ವಿಧಿಸಿರುವ ಷರತ್ತುಗಳು
1. ಕೇಜ್ರಿವಾಲ್ ಯಾವುದೇ ದಾಖಲೆಗೆ ಸಹಿ ಮಾಡುವ ಹಾಗಿಲ್ಲ.
2. ಮುಖ್ಯಮಂತ್ರಿಗಳ ಕಚೇರಿ ಹಾಗೂ ಸಚಿವಾಲಯಕ್ಕೆ ಹೋಗುವಂತಿಲ್ಲ.
3. ಮದ್ಯದ ಹಗರಣದ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡುವಂತಿಲ್ಲ.
4. ಮದ್ಯದ ಹಗರಣದ ಪ್ರಕರಣದಲ್ಲಿ ಯಾವುದೇ ಫೈಲ್ ನೋಡಬಾರದು ಅಥವಾ ತರಿಸುವಂತಿಲ್ಲ.
5. ವಿಚಾರಣೆಗೆ ಸಹಕರಿಸಬೇಕು ಹಾಗೆಯೇ ವಿಚಾರಣೆಯ ಸಮಯದಲ್ಲಿ ಹಾಜರಿರಬೇಕು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !