ರಾಜ್ಯದ ಪೊಲೀಸರ ತುಘಲಕಿ ಕೃತ್ಯ !

ಬೆಂಗಳೂರು – 3 ದಿನಗಳ ಹಿಂದೆ ನಾಗಮಂಗಲದಲ್ಲಿ ಗಣೇಶನ ವಿಸರ್ಜನಾ ಮೆರವಣಿಗೆ ಮೇಲೆ ಮುಸ್ಲಿಮರು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದರು. ಈ ಘಟನೆಯನ್ನು ಖಂಡಿಸಿ ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸೆಪ್ಟೆಂಬರ್ 13 ರ ಸಂಜೆ, ರಾಜಧಾನಿ ಬೆಂಗಳೂರಿನಲ್ಲಿ ನಾಗಮಂಗಲದ ಘಟನೆಯನ್ನು ವಿರೋಧಿಸಿ ಹಿಂದುತ್ವನಿಷ್ಠರು ಪ್ರತಿಭಟಿಸಿದರು. ಈ ವೇಳೆ ತಮ್ಮೊಂದಿಗೆ ಶ್ರೀ ಗಣೇಶ ಮೂರ್ತಿ ಕೂಡ ಇಟ್ಟುಕೊಂಡಿದ್ದರು. ಪೊಲೀಸರು ಆಂದೋಲನದ ವಿರುದ್ಧ ಕ್ರಮ ಕೈಗೊಂಡು ಹಿಂದುತ್ವನಿಷ್ಠರನ್ನು ಬಂಧಿಸಿದರು. ಈ ವೇಳೆ ಪೊಲೀಸರು ಹಿಂದೂಗಳ ಕೈಯಿಂದ ಗಣೇಶ ಮೂರ್ತಿಯನ್ನೂ ಕಸಿದುಕೊಂಡರು. ಪೊಲೀಸರು ಇಷ್ಟಕ್ಕೆ ನಿಲ್ಲದೇ ಮೂರ್ತಿಯನ್ನು ಪೊಲೀಸ್ ವ್ಯಾನ್ನಲ್ಲಿ ಇಟ್ಟರು. ಇದರಿಂದ ಅಲ್ಲಿದ್ದ ಹಿಂದೂಗಳು ಬೆಚ್ಚಿ ಬೀದ್ದರು. ಈ ಘಟನೆಯ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿದ್ದು, ಭಾರತದಾದ್ಯಂತ ಹಿಂದೂಗಳು ಇದನ್ನು ವಿರೋಧಿಸುತ್ತಿದ್ದಾರೆ.
ಕಾಂಗ್ರೆಸ್ ಸರಕಾರ ಪತನದ ಲಕ್ಷಣಗಳು ! – ಹಿಂದೂಗಳ ಪ್ರತಿಕ್ರಿಯೆ
ಇದು ಕಾಂಗ್ರೆಸ್ ಸರಕಾರದ ಪತನದ ಸೂಚನೆ ಎಂದು ನೆರೆದಿದ್ದ ಗಣೇಶ ಭಕ್ತರು ಹೇಳಿದ್ದಾರೆ. ಹಿಂದೂ ದೇವರನ್ನು ಅವಮಾನಿಸುವ ಈ ಸರಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಪಾದಕೀಯ ನಿಲುವು
|
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!