ನಾಗಮಂಗಲದ ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು ! – ಕರ್ನಾಟಕದ ಗೃಹ ಸಚಿವ

ನಾಗಮಂಗಲದಲ್ಲಿ ಮುಸ್ಲಿಮರು ನಡೆಸಿದ ದಾಳಿಯ ಆಧಾರದ ಮೇಲೆ ಕರ್ತವ್ಯ ಲೋಪ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಇವರು ಈ ಮಾಹಿತಿ ನೀಡಿದರು. ಈ ಕುರಿತು ಗೃಹ ಸಚಿವರು, ಗಣೇಶ ಮೂರ್ತಿ ಮೆರವಣಿಗೆ ಸಾಗುವ ಮಾರ್ಗದ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತು. ತನಿಖಾಧಿಕಾರಿಗಳು ಅದನ್ನು ಬದಲಾಯಿಸಿದರು. ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಪೊಲೀಸರೇ ಹೊಣೆಯಾಗಬೇಕಾಗುತ್ತದೆ ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಗಲಭೆ ಕುರಿತು ಉಪ ಪೊಲೀಸ್ ವರಿಷ್ಠಾಧಿಕಾರಿಗಳ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ. ಘಟನೆಗೆ ಕಾರಣದ ಬಗ್ಗೆ ವರದಿ ಕೇಳಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.