ಹಿಂದೂಗಳ ಅರ್ಜಿಯ ವಿಚಾರಣೆ ಅಲಹಾಬಾದ ಉಚ್ಚ ನ್ಯಾಯಾಲಯದಲ್ಲಿ ನಡೆಸಲಿದೆ !

ಮಥುರಾ (ಉತ್ತರ ಪ್ರದೇಶ) – ಶ್ರೀ ಕೃಷ್ಣಜನ್ಮಭೂಮಿ ಪ್ರಕರಣದಲ್ಲಿ ಅಲಹಾಬಾದ ಉಚ್ಚ ನ್ಯಾಯಾಲಯದ ವಿಚಾರಣೆಯಕ್ಕೆ ತಡೆಯಾಜ್ಞೆ ನೀಡಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ.
1. ಉಚ್ಚ ನ್ಯಾಯಾಲಯದ ತೀರ್ಪಿನ ವಿರುದ್ಧ ಈದ್ಗಾ ಮಸೀದಿ ಸಮಿತಿ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿತ್ತು. ಉಚ್ಚ ನ್ಯಾಯಾಲಯವು ಹಿಂದೂ ಪಕ್ಷಗಳ ಅರ್ಜಿಯನ್ನು ವಿಚಾರಣೆಗೆ ಯೋಗ್ಯವೆಂದು ಸ್ವೀಕರಿಸಿತ್ತು. ಉಚ್ಚ ನ್ಯಾಯಾಲಯದ ತೀರ್ಪನ್ನು ಆಕ್ಷೇಪಿಸಿ ಮಸೀದಿ ಸಮಿತಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.
2. ಸರ್ವೋಚ್ಚ ನ್ಯಾಯಾಲಯವು ಮಸೀದಿ ಸಮಿತಿಯ ಅರ್ಜಿಯ ವಿಚಾರಣೆ ನಡೆಸಿ ನೋಟಿಸ್ ಜಾರಿ ಮಾಡಿ ಉತ್ತರ ಕೇಳಿದೆ. ಸರ್ವೋಚ್ಚ ನ್ಯಾಯಾಲಯವು ಉಚ್ಚ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಈಗ ಈ ಪ್ರಕರಣದ ಮುಂದಿನ ವಿಚಾರಣೆ ನವೆಂಬರ್ 4 ರಂದು ನಡೆಯಲಿದೆ.
3. ಆಗಸ್ಟ್ 1, 2024 ರಂದು, ಅಲಹಾಬಾದ್ ಉಚ್ಚ ನ್ಯಾಯಾಲಯವು ಶ್ರೀ ಕೃಷ್ಣಜನ್ಮಭೂಮಿ ಪ್ರಕರಣವನ್ನು ವಿಚಾರಣೆಗೆ ಯೋಗ್ಯವೆಂದು ಪರಿಗಣಿಸಿತ್ತು. ಉಚ್ಚ ನ್ಯಾಯಾಲಯವು ಶಾಹಿ ಈದ್ಗಾ ಮಸೀದಿಯ ಮಾಲೀಕತ್ವದ ಬಗ್ಗೆ ಹಿಂದೂ ಪಕ್ಷಗಳು ಸಲ್ಲಿಸಿದ ಎಲ್ಲಾ 15 ದಿವಾಣಿ ಪ್ರಕರಣಗಳ ವಿಚಾರಣೆ ನಡೆಸಿ ಮುಸ್ಲಿಮರು ಸಲ್ಲಿಸಿದ ಎಲ್ಲಾ ಐದು ಆಕ್ಷೇಪಣೆಗಳನ್ನು ತಿರಸ್ಕರಿಸಿತು. ಈ ತೀರ್ಪನ್ನು ಈದ್ಗಾ ಸಮಿತಿ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ಇದೀಗ ಉಚ್ಚ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ.
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!