ಹಿಂದೂಗಳಿಂದ ತಕ್ಷಣ ಕ್ರಮಕ್ಕೆ ಆಗ್ರಹಿಸಿ ಆಂದೋಲನ

ಮಂದಸೌರ್ (ಮಧ್ಯಪ್ರದೇಶ) – ಇಲ್ಲಿನ ನೆಹರು ಬಸ್ ನಿಲ್ದಾಣದ ಬಳಿ ಈದ್ ಮೆರವಣಿಗೆ ವೇಳೆ ಮತಾಂಧ ಮುಸಲ್ಮಾನರು ಹನುಮಾನ್ ದೇವಸ್ಥಾನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಭಕ್ತರೊಬ್ಬರು ಗಾಯಗೊಂಡಿದ್ದಾರೆ. ಇದನ್ನು ವಿರೋಧಿಸಿದ ಹಿಂದೂಗಳು ದೊಡ್ಡ ಸಂಖ್ಯೆಯಲ್ಲಿ ಬೀದಿಗಿಳಿದು ಕಲ್ಲು ತೂರಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
1. ಹಿಂದೂ-ಮುಸ್ಲಿಂ ಪರಸ್ಪರ ಮುಖಾಮುಖಿಯಾದ ಕಾರಣ ಇಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದರು. ಸೂಕ್ತ ಕ್ರಮಕ್ಕೆ ಆಗ್ರಹಿಸಿದ ಹಿಂದೂ ಸಂಘಟನೆಯ ಸದಸ್ಯರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಇದನ್ನು ಪ್ರತಿಭಟಿಸಿ ರಸ್ತೆಯಲ್ಲೇ ಹನುಮಾನ್ ಚಾಲೀಸಾ ಪಠಿಸಿದರು. ‘ಈ ಘಟನೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿಲ್ಲ’, ಎಂದು ಹಿಂದೂಗಳು ಆರೋಪಿಸಿದ್ದಾರೆ. ಪ್ರತಿಭಟನಾಕಾರರನ್ನು ಶಾಂತಗೊಳಿಸಲು ಹಲವು ಹಿರಿಯ ಆಡಳಿತಾಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದರು. ‘ಕಲ್ಲು ತೂರಾಟ ನಡೆಸಿದವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು’, ಎಂದು ಆಡಳಿತ ಹೇಳಿದೆ.
2. ಈ ಪ್ರತಿಭಟನೆಗೆ ಸ್ಥಳೀಯ ವ್ಯಾಪಾರಿಗಳು ಕೂಡ ಬೆಂಬಲ ಸೂಚಿಸಿದ್ದು, ಮಾರುಕಟ್ಟೆಯನ್ನು ಬಂದ್ ಮಾಡಲಾಗಿತ್ತು. ವಿಶ್ವ ಹಿಂದೂ ಪರಿಷತ್ ‘ಕಲ್ಲು ತೂರಾಟದ ಘಟನೆಯ ಬಗ್ಗೆ ‘ಇದೊಂದು ಯೋಜಿತ ಪಿತೂರಿಯಾಗಿದೆ’ ಎಂದು ಹೇಳಿದೆ.
ಸಂಪಾದಕೀಯ ನಿಲುವುಮಧ್ಯಪ್ರದೇಶದಲ್ಲಿ ಭಾಜಪ ಸಲಕಾರವಿರುವಾಗ, ಹಿಂದೂಗಳ ದೇವಸ್ಥಾನಗಳ ಮೇಲೆ ದಾಳಿ ಮಾಡುವ ಧೈರ್ಯವಾದರೂ ಹೇಗೆ ಬರುತ್ತದೆ ? ಇನ್ನೆಂದೂ ಇಂತಹ ಧೈರ್ಯ ನಡೆಯದಂತೆ ಸರಕಾರ ಅವರನ್ನು ಹದ್ದುಬಸ್ತಿನಲ್ಲಿಡುವುದು ಅಗತ್ಯವಿದೆ ! |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ