ರೈಲ್ವೆ ಹಳಿಯ ಮೇಲೆ 6 ಮೀಟರ್ ಉದ್ದದ ಕಬ್ಬಿಣದ ಕಂಬ ಇಟ್ಟಿದ್ದ ಮೂವರ ಬಂಧನ !

ಡೆಹ್ರಾಡೂನ್ – ಚಾಲಕನ (‘ಲೋಕೋ ಪೈಲಟ್’ನ) ಜಾಗರೂಕತೆಯಿಂದ ರೈಲ್ವೆಯ ದೊಡ್ಡ ಅಪಘಾತ ತಪ್ಪಿದೆ. ಉತ್ತರಾಖಂಡದ ಬಿಲಾಸ್ಪುರ ರಸ್ತೆ ಮತ್ತು ರುದ್ರಪುರ ನಗರದ ನಡುವೆ ಈ ಘಟನೆ ನಡೆದಿದೆ. ಸೆಪ್ಟೆಂಬರ್ 18ರ ರಾತ್ರಿ 10 ಗಂಟೆಗೆ ರೈಲು ಸಂಖ್ಯೆ 12091 ಬಿಲಾಸ್ಪುರದಿಂದ ರುದ್ರಪುರ ಕಡೆಗೆ ಹೋಗುತ್ತಿತ್ತು. ಈ ವೇಳೆ ರೈಲ್ವೇ ಹಳಿಯ ಮೇಲೆ ಏನೋ ಇಟ್ಟಿರುವುದು ಚಾಲಕನ ಕಣ್ಣಿಗೆ ಬಿದ್ದಿದೆ. ಚಾಲಕನು ತುರ್ತು ಬ್ರೇಕ್ ಒತ್ತಿ ರೈಲನ್ನು ನಿಲ್ಲಿಸಿದ್ದಾನೆ. ಆನಂತರ ಚಾಲಕನು ಘಟನೆಯ ಮಾಹಿತಿಯನ್ನು ರುದ್ರಪುರ ಸಿಟಿ ರೈಲ್ವೇ ಸ್ಟೇಷನ್ ಮಾಸ್ಟರ್ಗೆ ತಿಳಿಸಿದನು. ರೈಲ್ವೆ ಅಧಿಕಾರಿಗಳಿಗೆ ರೈಲ್ವೆ ಹಳಿಯ ಮೇಲೆ 6 ಮೀಟರ್ ಉದ್ದದ ಕಬ್ಬಿಣದ ಕಂಬ ಸಿಕ್ಕಿದೆ. ಅವರು ಅದನ್ನು ಪಕ್ಕಕ್ಕೆ ತೆಗೆದು ರೈಲ್ವೇ ಮಾರ್ಗವನ್ನು ಸುಗಮಗೊಳಿಸಿದರು.
ಉತ್ತರ ರೈಲ್ವೇ ವಿಭಾಗದಿಂದ ಸಿಕ್ಕಿರುವ ಮಾಹಿತಿಯ ಪ್ರಕಾರ, ಈ ಪ್ರಕರಣದಲ್ಲಿ ಅಪರಾಧ ದಾಖಲಿಸಿಕೊಂಡಿರುವ ಪೊಲೀಸರು ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಅವರು ರೈಲ್ವೇ ಅಪಘಾತ ಘಟಿಸುವಂತೆ ಏನಾದರೂ ಸಂಚು ರೂಪಿಸಿದ್ದರೇ ?, ಈ ಕುರಿತು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದರಿಂದ ಸರಕಾರವೇ ಇದನ್ನು ಬುಡಸಮೇತ ಹುಡುಕಿ ತೆಗೆದು ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ! |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ