
ಡೆಲಾವೆರ್ (ಅಮೇರಿಕಾ) – ಜಗತ್ತು ಸಂಘರ್ಷದಲ್ಲಿರುವಾಗ ‘ಕ್ವಾಡ್’ ಸಭೆಯು ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ವಾಡ್ ಒಂದುಗೂಡುವ ಅಗತ್ಯವಿದೆ. ನಾವು ಯಾರ ವಿರುದ್ಧವೂ ಇಲ್ಲ. ನಾವು ನಿಯಮಾಧಾರಿತ ಅಂತರಾಷ್ಟ್ರೀಯ ಸುವ್ಯವಸ್ಥೆ, ಪ್ರಾದೇಶಿಕ ಸಮಗ್ರತೆ ಮತ್ತು ಎಲ್ಲಾ ಸಮಸ್ಯೆಗಳ ಶಾಂತಿಯುತ ಪರಿಹಾರವನ್ನು ಬೆಂಬಲಿಸುತ್ತೇವೆ ಎಂದು ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನುಡಿದರು.
Addressing the Quad Leaders’ Summit. https://t.co/fphRgLwLPS
— Narendra Modi (@narendramodi) September 21, 2024
1. ಈ ಸಭೆಯ ನಂತರ, ಅಮೇರಿಕೆಯ ಅಧ್ಯಕ್ಷ ಜೋ ಬೈಡನ್ ಅವರನ್ನು ಚುನಾವಣೆಯ ನಂತರ ಸಂಘಟನೆಯ ಅಸ್ತಿತ್ವದ ಬಗ್ಗೆ ಪ್ರಶ್ನಿಸಲಾಯಿತು. ಇದಕ್ಕೆ ಬೈಡನ್ ಅವರು ಪ್ರಧಾನಿ ಮೋದಿಯವರ ಹೆಗಲ ಮೇಲೆ ಕೈಯಿಟ್ಟು, ಚುನಾವಣೆಯ ಬಳಿಕವೂ ಸಂಘಟನೆ ಮುಂದುವರಿಯಲಿದೆ’ ಎಂದು ಸ್ಪಷ್ಟಪಡಿಸಿದರು.
2. ಪ್ರಧಾನಿ ಮೋದಿ ಅವರು ಇಂಡೋ-ಪೆಸಿಫಿಕ್ (ಹಿಂದೂ ಮಹಾಸಾಗರ ಮತ್ತು ಪೆಸಿಫಿಕ್ ಸಾಗರದ ಸಮುದ್ರತೀರದ ದೇಶಗಳು) ದೇಶಗಳಿಗೆ 4 ಕೋಟಿ ರೂಪಾಯಿಗಳ ಉಚಿತ ಲಸಿಕೆಗಳನ್ನು ನೀಡುವುದಾಗಿ ಘೋಷಿಸಿದರು. ಶೃಂಗಸಭೆ ಮೊದಲು ಪ್ರಧಾನಿ ಮೋದಿ ಅವರು ರಾಷ್ಟ್ರಾಧ್ಯಕ್ಷ ಬೈಡನ್ ಅವರನ್ನು ಡೆಲಾವೇರ್ನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದರು. ಬೈಡನ್ ಮೋದಿ ಅವರನ್ನು ಸ್ವಾಗತಿಸಿದರು. ಇದಾದ ಬಳಿಕ ಇಬ್ಬರ ನಡುವೆ ದ್ವಿಪಕ್ಷೀಯ ಸಭೆ ನಡೆಯಿತು. ಪ್ರಧಾನಿ ಮೋದಿ ಜಪಾನ್ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿಗಳೊಂದಿಗೆ ದ್ವಿಪಕ್ಷೀಯ ಚರ್ಚೆ ಕೂಡ ನಡೆಸಿದರು.
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!