ಪೊಲೀಸ್ ಎಫ್ಐಆರ್ನಲ್ಲಿ ಆಘಾತಕಾರಿ ಅಂಶ ಬಯಲು !

ದಾವಣಗೆರೆ – ಸಪ್ಟೆಂಬರ 19 ರಂದು ಸಂಜೆ ಕೆ.ಆರ್. ರಸ್ತೆಯ ಮೇಲಿನ ಮುದೇಗೌಡ ಮಲ್ಲಮ್ಮ ಮುರಿಗೆಪ್ಪ ಶಾಲೆ ಹತ್ತಿರ ಅಂದಾಜು 70-80 ಅನ್ಯ ಕೋಮಿನ ಯುವಕರ ಗುಂಪು ಆಝಾದ ನಗರದ ಶ್ರೀ ಗಣೇಶಮೂರ್ತಿಯ ವಿಸರ್ಜನೆಯ ಮೆರವಣಿಗೆಯ ಮೇಲೆ ದಾಳಿ ನಡೆಸಿ ಹಿಂದೂಗಳನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರ ಎಫ್ಐಆರ್ನಿಂದ ಬೆಳಕಿಗೆ ಬಂದಿದೆ.
ವಿಸರ್ಜನೆಯ ಮೆರವಣಿಗೆ ಜಗಳೂರ ಬಸ್ ನಿಲ್ದಾಣದ ಹತ್ತಿರದ ವಾಟರ ಟ್ಯಾಂಕ ಹತ್ತಿರ ಬಂದಾಗ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ನರಸರಾಜ ಪೇಟೆಯ ಮುಖ್ಯ ರಸ್ತೆಯ ಮಾರ್ಗದಲ್ಲಿ ಬಂದ ಸುಮಾರು 70-80 ಯುವಕರು ಏಕಾಏಕಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಿಂದ ಅಲ್ಲಿದ್ದ ಪೊಲೀಸರು ಗಾಯಗೊಂಡರು. ತಕ್ಷಣವೇ ಗುಂಪನ್ನು ಚದುರಿಸಿ ಮೆರವಣಿಗೆಯನ್ನು ಮುಂದಕ್ಕೆ ಒಯ್ಯಲಾಯಿತು. ಈ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಎಫ್.ಐ.ಆರ್. ದಾಖಲಿಸಲಾಗಿದ್ದು, ಇಲ್ಲಿಯವರೆಗೆ 48 ಜನರನ್ನು ಬಂಧಿಸಲಾಗಿದೆ. ಸಾಕ್ಷಿಗಳ ಆಧಾರದಲ್ಲಿ ಇನ್ನಷ್ಟು ಆರೋಪಿಗಳನ್ನು ಬಂಧಿಸುವ ಪ್ರಕ್ರಿಯೆ ಮುಂದುವರಿದಿದೆಯೆಂದು ಪೊಲೀಸ ಅಧೀಕ್ಷಕರಾದ ಉಮಾ ಪ್ರಶಾಂತ ಅವರು ಮಾಹಿತಿ ನೀಡಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !