ತಮಿಳುನಾಡಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಬಲಾತ್ಕಾರ

ದಿಂಡಿಗುಲ (ತಮಿಳುನಾಡು) – ದಿಂಡಿಗುಲ ಥೇಣಿಯಲ್ಲಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಲಾಗಿದೆ. ಸಂತ್ರಸ್ತೆಯನ್ನು ಅಪರಿಚಿತ ವ್ಯಕ್ತಿಗಳು ಅಪಹರಿಸಿ ನಂತರ ಅವಳ ಮೇಲೆ ಸಾಮೂಹಿಕ ಬಲಾತ್ಕಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರದ ನಂತರ ನೀಚರು ಸಂತ್ರಸ್ತೆಯನ್ನು ದಿಂಡಿಗಲ ರೈಲು ನಿಲ್ದಾಣದ ಬಳಿ ಬಿಟ್ಟು ಓಡಿ ಹೋಗಿದ್ದಾರೆ. ಸಂತ್ರಸ್ತೆಯನ್ನು ದಿಂಡಿಗುಲ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಸಂಪಾದಕೀಯ ನಿಲುವು

ಮಹಿಳಾ ವೈದ್ಯರು ಮತ್ತು ದಾದಿಯರ ಮೇಲಾಗುವ ಲೈಂಗಿಕ ದೌರ್ಜನ್ಯವು ಸರಕಾರ, ಪೋಲೀಸರು ಮತ್ತು ಆಡಳಿತಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ ! ಬಲಾತ್ಕಾರ ಮಾಡಿರುವ ಅಪರಾಧಿಗಳಿಗೆ ಮರಣದಂಡನೆ ವಿಧಿಸದ ಕಾರಣ, ಇಂತಹ ಘಟನೆಗಳು ನಿಲ್ಲುವ ಬದಲು ಹೆಚ್ಚಾಗುತ್ತಿವೆ, ಇದು ಭಾರತೀಯ ವ್ಯವಸ್ಥೆಗೂ ಶೋಭಿಸುವುದಿಲ್ಲ !