ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ವಾಗ್ವಾದ

ಮುಂಬಯಿ – ‘ವಕ್ಫ್ ಬೋರ್ಡ್’ಗೆ ಸಂಬಂಧಿಸಿದ ಮಸೂದೆಯ ಸಂದರ್ಭದಲ್ಲಿ ಜಂಟಿ ಸಂಸದೀಯ ಸಮಿತಿಯ ಸಭೆ ಸೆಪ್ಟೆಂಬರ್ 26 ರಂದು ನಡೆಯಿತು. ಈ ಸಭೆಯಲ್ಲಿ ‘ಗುಲ್ಶನ್ ಫೌಂಡೇಶನ್’ ಪ್ರತಿನಿಧಿ ಸಭೆಯಲ್ಲಿ ವಕ್ಫ್ ಮಸೂದೆಯನ್ನು ಬೆಂಬಲಿಸುವ ಹೇಳಿಕೆಗಳನ್ನು ನೀಡಿದ್ದಾರೆ. ಆಗ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಅದನ್ನು ವಿರೋಧಿಸಿದರು. ತದನಂತರ ಶಿವಸೇನಾ ಸಂಸದ ನರೇಶ್ ಮ್ಹಸ್ಕೆ ಅವರು ಪ್ರತಿಭಟನೆ ನಡೆಸಿ ಕಲ್ಯಾಣ್ ಬ್ಯಾನರ್ಜಿ ಅವರನ್ನು ತಡೆದರು. ಈ ಸಂದರ್ಭದಲ್ಲಿ ಬಹಳ ವಾಗ್ವಾದ ನಡೆಯಿತು. ತದ ನಂತರ ವಿರೋಧಪಕ್ಷವು ಆ ಇಬ್ಬರನ್ನೂ ಸಭೆಯಿಂದ ಹೊರಹಾಕುವ ನಿರ್ಧಾರವನ್ನು ತೆಗೆದುಕೊಂಡಿತು; ಆದರೆ ನಂತರ ಸಭೆ ನಿಲ್ಲಿಸಿ ಮತ್ತೆ ಆರಂಭಿಸಲಾಯಿತು.
ಮೋದಿ ಸರಕಾರವು ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದು ಅದರಲ್ಲಿ 40 ಹೊಸ ನಿಯಮಗಳಿಗೆ ಅವಕಾಶ ಕಲ್ಪಿಸಿದೆ. ಈ ಕಾರಣದಿಂದಾಗಿ, ಯಾವುದೇ ಆಸ್ತಿಯನ್ನು ವಕ್ಫ್ ಮಂಡಳಿಯ ಆಸ್ತಿಯಾಗಿ ಪರಿವರ್ತಿಸುವುದಕ್ಕೆ ಅಂಕುಶ ಬೀಳಲಿದೆ. ಈ ಮಸೂದೆಗೆ ಅನುಮೋದನೆ ದೊರೆತರೆ ವಕ್ಫ್ ಮಂಡಳಿಯ ಆಸ್ತಿ ನಿರ್ವಹಣೆ ಮತ್ತು ವರ್ಗಾವಣೆಗೆ ಸಂಬಂಧಿಸಿದ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ‘ವಕ್ಫ್’ ಎಂಬುದು ಅರೇಬಿಕ್ ಪದವಾಗಿದ್ದು, ಇದರ ಅರ್ಥ ‘ನಿಲ್ಲಿಸುವುದು’ ಅಥವಾ ‘ಸಮರ್ಪಿಸುವುದು’ ಎಂದಾಗಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ