ನವದೆಹಲಿ – ಯಾರಾದರೂ ಆರೋಪಿ ಅಥವಾ ತಪ್ಪಿತಸ್ಥರಾಗಿದ್ದಾರೆಂದು ಅವನ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ; ಆದರೆ ಸಾರ್ವಜನಿಕ ರಸ್ತೆ ಮತ್ತು ಸರಕಾರಿ ಭೂಮಿಯ ಮೇಲಿನ ಯಾವುದೇ ಅಕ್ರಮ ಕಟ್ಟಡಕ್ಕೆ ರಕ್ಷಣೆ ನೀಡಲಾಗುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟಪಡಿಸಿದೆ. `ಭಾರತವು ಜಾತ್ಯತೀತ ದೇಶವಾಗಿದ್ದು, ಅತಿಕ್ರಮಣದ ವಿರುದ್ಧ ಬುಲ್ಡೋಜರ ಕಾರ್ಯಾಚರಣೆಯು ಎಲ್ಲರಿಗೆ ಅಂದರೆ ಯಾವುದೇ ಧರ್ಮದವರಾಗಿರಲಿ ಸಮಾನವಾಗಿರಲಿದೆ.’ ಎಂದು ನ್ಯಾಯಾಲಯ ಆದೇಶ ನೀಡಿದೆ. ಅನೇಕ ರಾಜ್ಯಗಳಲ್ಲಿ ಅಪರಾಧಿ, ಆರೋಪಿ ಮತ್ತು ಇತರರ ಆಸ್ತಿ ಕೆಡವುತ್ತಿರುವ ಆರೋಪಿಸುವ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ಕೈಗೆತ್ತಿಕೊಂಡಿದೆ.
ಸರ್ವೋಚ್ಚ ನ್ಯಾಯಾಲಯವು ಸೆಪ್ಟೆಂಬರ್ 17 ರಂದು ನೀಡಿರುವ ಆದೇಶದಲ್ಲಿ ಅಕ್ರಮ ನಿರ್ಮಾಣಗಳ ಮೇಲೆ ಬುಲ್ಡೋಜರ್ ಉಪಯೋಗಿಸಲು ನಿರ್ಬಂಧ ಹೇರಿತ್ತು. ನ್ಯಾಯಾಲಯವು ಅಕ್ಟೋಬರ್ 1 ರವರೆಗೆ ಸರ್ವೋಚ್ಚ ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಯಾವುದೇ ಆಸ್ತಿಯನ್ನು ಬೀಳಿಸಬಾರದು ಎಂದು ಹೇಳಿದೆ.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation