ಕಾಶ್ಮೀರಕ್ಕೆ ನುಸುಳುತ್ತಿದ್ದ ಇಬ್ಬರು ಉಗ್ರರ ಹತ್ಯೆ

ಶ್ರೀನಗರ (ಜಮ್ಮು-ಕಾಶ್ಮೀರ) – ಕುಪ್ವಾರದ ಗೂಗಲ್‌ಧರ್ ಪ್ರದೇಶದಿಂದ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಉಗ್ರರು ಇಲ್ಲಿ ನುಸುಳಲಿದ್ದಾರೆ ಎಂಬ ಮಾಹಿತಿ ಸೇನೆಗೆ ಸಿಕ್ಕಿದೆ. ಮಧ್ಯರಾತ್ರಿ ಅಲ್ಲಿ ಮೂವರ ಅನುಮಾನಾಸ್ಪದ ಚಲನವಲನ ಕಂಡು ಬಂದಿದೆ. ಆ ನಂತರ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಪ್ರತೀಕಾರದ ಗುಂಡಿನ ದಾಳಿಯಲ್ಲಿ 2 ಭಯೋತ್ಪಾದಕರು ಹತರಾಗಿ, 1 ಪರಾರಿಯಾಗಿದ್ದಾರೆ. ಹತರಾದ ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.