|

ತಿರುವನಂತಪುರಮ(ಕೇರಳ) – ಶಬರಿಮಲಾ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಬರುವ ಭಕ್ತರಿಗೆ `ಅರವಣ ಪ್ರಸಾದ’ ನೀಡಲಾಗುತ್ತದೆ.ಅಯ್ಯಪ್ಪಾ ಸ್ವಾಮಿಯ ಚಿತ್ರ ಮುದ್ರಿತಗೊಂಡಿರುವ ಚಿಕ್ಕ ಡಬ್ಬಿಯಲ್ಲಿ ಈ ಪ್ರಸಾದವನ್ನು ಭಕ್ತರಿಗೆ ನೀಡಲಾಗುತ್ತದೆ. ಕಳೆದ ಒಂದು ವರ್ಷದಿಂದ ಸಂಗ್ರಹಿಸಿಡಲಾಗಿದ್ದ ಅರವಣ ಪ್ರಸಾದದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹುಳುಗಳು ಕಂಡು ಬಂದಿದ್ದರಿಂದ 2023 ರ ಜನವರಿಯಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು. ಆದರೆ ದೂರುದಾರರು ಈ ಸಂದರ್ಭದಲ್ಲಿ ಯಾವುದೇ ದಾಖಲೆಗಳನ್ನು ಹಾಜರು ಪಡಿಸಿರಲಿಲ್ಲ; ಎಂದು ಸರ್ವೋಚ್ಚ ನ್ಯಾಯಾಲಯವು ದೂರನ್ನು ವಜಾಗೊಳಿಸಿತ್ತು. ತದನಂತರ ಈ ದೇವಸ್ಥಾನದ ನಿಯಂತ್ರಣ ಹೊಂದಿರುವ ತ್ರಾವಣಕೋರ ದೇವಸ್ವಮ್ ಬೋರ್ಡ್ನ ಸುಮಾರು 6 ಲಕ್ಷ 65 ಸಾವಿರ ಡಬ್ಬಿಗಳಲ್ಲಿ (ಟಿನ್ ಕಂಟೇನರಗಳಲ್ಲಿ) ಸಂಗ್ರಹಿಸಲಾಗಿದ್ದ ಅರವಣ ಪ್ರಸಾದವನ್ನು ದೀರ್ಘಕಾಲದ ವರೆಗೆ ಸಂಗ್ರಹಿಸಿಟ್ಟಿದ್ದರಿಂದ ಭಕ್ತರಿಗೆ ವಿತರಿಸದಿರುವಂತೆ ನಿರ್ಣಯಿಸಿದ್ದಾರೆ. ಮೊದಲು ಈ ಪ್ರಸಾದವನ್ನು ಕಾಡಿನಲ್ಲಿ ಎಸೆಯಲು ಪ್ರಸ್ತಾವನೆಯನ್ನು ಮಂಡಿಸಲಾಗಿತ್ತು; ಆದರೆ ಪ್ರಸಾದವನ್ನು ಅರಣ್ಯದಲ್ಲಿ ಎಸೆಯುವ ಬದಲಾಗಿ ಅದನ್ನು ವೈಜ್ಞಾನಿಕ ಪದ್ಧತಿಯಿಂದ ಸಂಸ್ಕರಿಸಿ ಗೊಬ್ಬರವಾಗಿ ಪರಿವರ್ತಿಸುವುದು ಸೂಕ್ತವೆಂದು ಅಂತಿಮವಾಗಿ ನಿರ್ಧರಿಸಲಾಯಿತು. ಈ ಪ್ರಸಾದದ ಒಟ್ಟು ಮೌಲ್ಯ ಐದೂವರೆ ಕೋಟಿಗಳಷ್ಟು ಇದೆಯೆಂದು ಹೇಳಲಾಗುತ್ತಿದೆ.
ಸಂಪಾದಕೀಯ ನಿಲುವುಯಾವುದೇ ಪ್ರಸಾದ ದೀರ್ಘಕಾಲ ಏಕೆ ಸಂಗ್ರಹಿಸಿಡಲಾಗುತ್ತದೆ ? |
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !