|

ತಿರುವನಂತಪುರಮ(ಕೇರಳ) – ಶಬರಿಮಲಾ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಬರುವ ಭಕ್ತರಿಗೆ `ಅರವಣ ಪ್ರಸಾದ’ ನೀಡಲಾಗುತ್ತದೆ.ಅಯ್ಯಪ್ಪಾ ಸ್ವಾಮಿಯ ಚಿತ್ರ ಮುದ್ರಿತಗೊಂಡಿರುವ ಚಿಕ್ಕ ಡಬ್ಬಿಯಲ್ಲಿ ಈ ಪ್ರಸಾದವನ್ನು ಭಕ್ತರಿಗೆ ನೀಡಲಾಗುತ್ತದೆ. ಕಳೆದ ಒಂದು ವರ್ಷದಿಂದ ಸಂಗ್ರಹಿಸಿಡಲಾಗಿದ್ದ ಅರವಣ ಪ್ರಸಾದದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹುಳುಗಳು ಕಂಡು ಬಂದಿದ್ದರಿಂದ 2023 ರ ಜನವರಿಯಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು. ಆದರೆ ದೂರುದಾರರು ಈ ಸಂದರ್ಭದಲ್ಲಿ ಯಾವುದೇ ದಾಖಲೆಗಳನ್ನು ಹಾಜರು ಪಡಿಸಿರಲಿಲ್ಲ; ಎಂದು ಸರ್ವೋಚ್ಚ ನ್ಯಾಯಾಲಯವು ದೂರನ್ನು ವಜಾಗೊಳಿಸಿತ್ತು. ತದನಂತರ ಈ ದೇವಸ್ಥಾನದ ನಿಯಂತ್ರಣ ಹೊಂದಿರುವ ತ್ರಾವಣಕೋರ ದೇವಸ್ವಮ್ ಬೋರ್ಡ್ನ ಸುಮಾರು 6 ಲಕ್ಷ 65 ಸಾವಿರ ಡಬ್ಬಿಗಳಲ್ಲಿ (ಟಿನ್ ಕಂಟೇನರಗಳಲ್ಲಿ) ಸಂಗ್ರಹಿಸಲಾಗಿದ್ದ ಅರವಣ ಪ್ರಸಾದವನ್ನು ದೀರ್ಘಕಾಲದ ವರೆಗೆ ಸಂಗ್ರಹಿಸಿಟ್ಟಿದ್ದರಿಂದ ಭಕ್ತರಿಗೆ ವಿತರಿಸದಿರುವಂತೆ ನಿರ್ಣಯಿಸಿದ್ದಾರೆ. ಮೊದಲು ಈ ಪ್ರಸಾದವನ್ನು ಕಾಡಿನಲ್ಲಿ ಎಸೆಯಲು ಪ್ರಸ್ತಾವನೆಯನ್ನು ಮಂಡಿಸಲಾಗಿತ್ತು; ಆದರೆ ಪ್ರಸಾದವನ್ನು ಅರಣ್ಯದಲ್ಲಿ ಎಸೆಯುವ ಬದಲಾಗಿ ಅದನ್ನು ವೈಜ್ಞಾನಿಕ ಪದ್ಧತಿಯಿಂದ ಸಂಸ್ಕರಿಸಿ ಗೊಬ್ಬರವಾಗಿ ಪರಿವರ್ತಿಸುವುದು ಸೂಕ್ತವೆಂದು ಅಂತಿಮವಾಗಿ ನಿರ್ಧರಿಸಲಾಯಿತು. ಈ ಪ್ರಸಾದದ ಒಟ್ಟು ಮೌಲ್ಯ ಐದೂವರೆ ಕೋಟಿಗಳಷ್ಟು ಇದೆಯೆಂದು ಹೇಳಲಾಗುತ್ತಿದೆ.
ಸಂಪಾದಕೀಯ ನಿಲುವುಯಾವುದೇ ಪ್ರಸಾದ ದೀರ್ಘಕಾಲ ಏಕೆ ಸಂಗ್ರಹಿಸಿಡಲಾಗುತ್ತದೆ ? |
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!