ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಸುರೇಂದ್ರ ಚೌಧರಿ ಉಪ ಮುಖ್ಯಮಂತ್ರಿ

ಶ್ರೀನಗರ (ಜಮ್ಮು- ಕಾಶ್ಮೀರ) – ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಅವರು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಈ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾದರು. ಸುರೇಂದ್ರ ಚೌಧರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೆ 4 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರಲ್ಲಿ ಸ್ವತಂತ್ರ ಸಂಸದ ಸತೀಶ್ ಶರ್ಮಾ ಸೇರಿದ್ದಾರೆ. ಅವರು ಓಮರ್ ಅಬ್ದುಲ್ಲಾ ಅವರ ನ್ಯಾಶನಲ್ ಕಾನ್ಫರೆನ್ಸ್ನ ಅನ್ನು ಬೆಂಬಲಿಸಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ರಚಿಸಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು; ಆದರೆ ಕಾಂಗ್ರೆಸ್ ಸರಕಾರದಲ್ಲಿ ಸಹಭಾಗಿಯಾಗಲು ನಿರಾಕರಿಸಿತು. ಆದ್ದರಿಂದ ಈ ಸರಕಾರದಲ್ಲಿ ಅವರ ಯಾವುದೇ ಸಚಿವರು ಇಲ್ಲ.