
ನರಕ ಚತುರ್ದಶಿಯಂದು ಶ್ರೀವಿಷ್ಣುವು ಲಕ್ಷ್ಮೀ ಸಹಿತ ಎಲ್ಲ ದೇವತೆಗಳನ್ನು ಬಲಿ ಚಕ್ರವರ್ತಿಯ ಸೆರೆಮನೆಯಿಂದ ಮುಕ್ತಗೊಳಿಸಿದನು. ಅನಂತರ ಆ ಎಲ್ಲ ದೇವತೆಗಳು ಕ್ಷೀರಸಾಗರದಲ್ಲಿ ಹೋಗಿ ಮಲಗಿದರು ಎನ್ನುವ ಕಥೆ ಇದೆ. ಈ ದಿನ ‘ಪ್ರಾತಃಕಾಲದಲ್ಲಿ ಮಂಗಲಸ್ನಾನ ಮಾಡಿ ದೇವರ ಪೂಜೆ, ಮಧ್ಯಾಹ್ನ ಪಾರ್ವಣಶ್ರಾದ್ಧ ಹಾಗೂ ಬ್ರಾಹ್ಮಣಭೋಜನ ಮತ್ತು ಪ್ರದೋಷಕಾಲದಲ್ಲಿ ಎಲೆ-ಬಳ್ಳಿಗಳಿಂದ ಶೃಂಗರಿಸಿದ ಮಂಟಪದಲ್ಲಿ ಲಕ್ಷ್ಮೀ, ಶ್ರೀವಿಷ್ಣು ಮುಂತಾದ ದೇವತೆಗಳು ಮತ್ತು ಕುಬೇರನ ಪೂಜೆ ಮಾಡುತ್ತಾರೆ. ಲಕ್ಷ್ಮೀಯ ಪೂಜೆ ಮಾಡುವಾಗ ಒಂದು ಚೌರಂಗದ ಮೇಲೆ ಅಕ್ಷತೆಗಳಿಂದ ಅಷ್ಟದಳ ಕಮಲ ಅಥವಾ ಸ್ವಸ್ತಿಕ ಬಿಡಿಸಿ ಅದರ ಮೇಲೆ ಲಕ್ಷ್ಮೀಯ ಮೂರ್ತಿಯನ್ನು ಸ್ಥಾಪಿಸುತ್ತಾರೆ. ಕೆಲವೆಡೆ ಕಲಶದ ಮೇಲೆ ತಾಮ್ರದ ತಟ್ಟೆಯನ್ನಿಟ್ಟು ಅದರ ಮೇಲೆ ಲಕ್ಷ್ಮೀಯ ಮೂರ್ತಿ ಇಡುತ್ತಾರೆ. ಕಲಶದ ಮೇಲೆ ಲಕ್ಷ್ಮಿಯ ಸಮೀಪ ಕುಬೇರನ ಪ್ರತಿಮೆ ಇಡುತ್ತಾರೆ. ಲಕ್ಷ್ಮಿ ಮತ್ತು ಇತರ ದೇವತೆಗಳಿಗೆ ಲವಂಗ, ಏಲಕ್ಕಿ ಮತ್ತು ಸಕ್ಕರೆಯಿಂದ ತಯಾರಿಸಿದ ಹಸುವಿನ ಹಾಲಿನ ಖವೆಯ ನೈವೇದ್ಯ ಅರ್ಪಿಸುತ್ತಾರೆ.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?