
ನವ ದೆಹಲಿ – ಕಳೆದ 4 ವರ್ಷಗಳಿಂದ ಬಾಕಿ ಉಳಿದಿರುವ ದೇಶದ ಜನಗಣತಿಯು ಮುಂದಿನ ವರ್ಷ ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ. ಕೇಂದ್ರ ಸರಕಾರ 2025ರಲ್ಲಿ ಜನಗಣತಿ ಆರಂಭಿಸಿ 2026ಕ್ಕೆ ಪೂರ್ಣಗೊಳಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಯೋಜನೆ ಆರಂಭಿಸಿದೆ ಎನ್ನಲಾಗಿದೆ. ಈ ಬಗ್ಗೆ ಕೇಂದ್ರ ಸರಕಾರ ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ದೇಶದಲ್ಲಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತಿತ್ತು. ಜನಗಣತಿಯನ್ನು 2021 ರಲ್ಲಿ ನಡೆಸಲಾಗುವುದು ಎಂದು ನಿರೀಕ್ಷಿಸಲಾಗಿತ್ತು; ಆದರೆ ಕೊರೊನಾದಿಂದಾಗಿ ಅದು ಸಾಧ್ಯವಾಗಲಿಲ್ಲ ಮತ್ತು ನಂತರವೂ ಅದು ಆಗಲಿಲ್ಲ.
ಜನಗಣತಿ ನಂತರ ದೇಶದ ಒಟ್ಟು ಜನಸಂಖ್ಯೆ ಎಷ್ಟು ಎಂಬುದು ಗೊತ್ತಾಗಲಿದೆ. ಯಾವ ಧರ್ಮದ ಎಷ್ಟು ಪ್ರಜೆಗಳಿದ್ದಾರೆ?, ಎಂಬುದು ಕೂಡ ಸ್ಪಷ್ಟವಾಗಲಿದೆ. ಈ ಜನಗಣತಿಯ ನಂತರ ಲೋಕಸಭಾ ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಬಹುದು. ಈ ಗಣತಿಯಲ್ಲಿ ಜಾತಿವಾರು ಗಣತಿಗೆ ಆಗ್ರಹಿಸಲಾಗುತ್ತಿದೆ. ಆಗುತ್ತದೋ ಇಲ್ಲವೋ ಎಂಬುದು ಕೂಡ ಆ ವೇಳೆಗೆ ಸ್ಪಷ್ಟವಾಗಲಿದೆ.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation