
ಇಂಫಾಲ (ಮಣಿಪುರ)- ಕಳೆದ ವಾರ ಜಿರಿಬಾಮ ಜಿಲ್ಲೆಯಿಂದ ನಾಪತ್ತೆಯಾಗಿದ್ದ ಓರ್ವ ಮಹಿಳೆ ಮತ್ತು ಇಬ್ಬರು ಚಿಕ್ಕ ಮಕ್ಕಳು ಸಾವನ್ನಪ್ಪಿದ್ದು ಅವರ ಮೃತ ದೇಹಗಳು ಸಿಕ್ಕಿದ್ದವು. ನವೆಂಬರ್ ೧೫ ರಂದು ಮೃತರಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸುತ್ತಾ ಆಕ್ರೋಶಗೊಂಡ ಪ್ರತಿಭಟನಾಕಾರರು ೩ ಸಚಿವರು ಮತ್ತು ೬ ಶಾಸಕರ ಮನೆಗಳ ಮೇಲೆ ದಾಳಿ ಮಾಡಿದರು. ಆಕ್ರೋಶಗೊಂಡಿದ್ದ ಪ್ರತಿಭಟನಾಕಾರರ ಈ ಗುಂಪು ಸಚಿವ ಸಪನ ರಂಜನ, ಮುಖ್ಯಮಂತ್ರಿ ಬೀರೇನ ಸಿಂಹ ಅವರ ಅಳಿಯ ಮತ್ತು ಭಾಜಪ ಶಾಸಕ ಆರ್.ಕೆ.ಇಮೋಸಿಂಗ್ ಅವರ ಮನೆಯ ಮೇಲೆ ಕೂಡ ದಾಳಿ ನಡೆಸಿತು. ಅಲ್ಲದೇ ತಡರಾತ್ರಿ ಈ ಗುಂಪು ಮುಖ್ಯಮಂತ್ರಿ ಬೀರೇನ ಸಿಂಹ ಅವರ ಮನೆ ತಲುಪಿತು. ಪ್ರತಿಭಟನಾಕಾರರನ್ನು ತೆರವುಗೊಳಿಸಲು ಭದ್ರತಾ ಪಡೆಯು ಆಶ್ರುವಾಯು ಉಪಯೋಗಿಸಿ ಗಾಳಿಯಲ್ಲಿ ಗುಂಡು ಹಾರಿಸಿತು. ಇಂಫಾಲದಲ್ಲಿ ಹದಗೆಟ್ಟಿರುವ ಪರಿಸ್ಥಿತಿಯನ್ನು ಗಮನಿಸಿ ೫ ಜಿಲ್ಲೆಗಳಲ್ಲಿ ಸಂಚಾರ ನಿಷೇಧ ಜಾರಿಗೊಳಿಸಲಾಗಿದೆ. ಇದರ ಜೊತೆಗೆ ೭ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಬಂದ್ ಮಾಡಲಾಗಿದೆ.
ಕೆಲವು ಸಚಿವರು ಮತ್ತು ಭಾಜಪದ ೧೯ ಶಾಸಕರು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಪತ್ರ ಬರೆದು ಮುಖ್ಯಮಂತ್ರಿಯ ಬಿರೇನ ಸಿಂಹ ಅವರನ್ನು ಪದಚ್ಯುತಗೊಳಿಸಲು ಆಗ್ರಹಿಸಿದ್ದಾರೆ. ಮೂಲಗಳಿಂದ ತಿಳಿದಿರುವ ಮಾಹಿತಿಯ ಪ್ರಕಾರ, ಬರುವ ೨-೩ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಟ್ಟರೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬಹುದು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ