
ಅಗರ್ತಲಾ (ತ್ರಿಪುರ) – ರೈಲ್ವೆ ಪೊಲೀಸರು ಮತ್ತು ಗಡಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಾಜ್ಯದ ಖೋವಾಯಿ ಜಿಲ್ಲೆಯ ತೆಲಮುಡಾ ರೈಲು ನಿಲ್ದಾಣದಿಂದ 12 ಬಾಂಗ್ಲಾದೇಶಿ ನುಸುಳುಕೋರರನ್ನು ಬಂಧಿಸಲಾಗಿದೆ. ಇವರೆಲ್ಲರೂ ಈ ನಿಲ್ದಾಣದಿಂದ ಭಾರತದ ಇತರೆ ರಾಜ್ಯಗಳಿಗೆ ಹೋಗಲು ಪ್ರಯತ್ನಿಸುತ್ತಿದ್ದರು.
ಬಂಧಿಸಲಾಗಿರುವ ನುಸುಳುಕೋರರಲ್ಲಿ 4 ಮಹಿಳೆಯರು, 4 ಪುರುಷರು ಮತ್ತು 4 ಮಕ್ಕಳು ಸೇರಿದ್ದಾರೆ. ಇವರೆಲ್ಲರೂ ಬಾಂಗ್ಲಾದೇಶದ ದಲ್ಲಾಳಿಗಳ ಮೂಲಕ ಸಿಲಾಚಾರಿ ಪ್ರದೇಶದ ಮೂಲಕ ಭಾರತದಲ್ಲಿ ನುಸುಳಿದ್ದರು. ಭದ್ರತಾ ಸಿಬ್ಬಂದಿಯನ್ನು ನೋಡಿ ಜೊತೆಯಲ್ಲಿದ್ದ ಸಹಚರನು ಓಡಿ ಹೋದನು. ಈ ರೈಲು ನಿಲ್ದಾಣದಲ್ಲಿ ಈ ಹಿಂದೆಯೂ ಹಲವು ಬಾರಿ ಈ ರೀತಿಯ ಕಾರ್ಯಾಚರಣೆ ನಡೆಸಲಾಗಿದೆ. ಬಾಂಗ್ಲಾದೇಶಿ ನುಸುಳುಕೋರರು ತ್ರಿಪುರಾ ಮೂಲಕ ಭಾರತದ ವಿವಿಧ ನಗರಗಳಲ್ಲಿ ಅಕ್ರಮವಾಗಿ ನೆಲೆಸುತ್ತಾರೆ.
ಸಂಪಾದಕೀಯ ನಿಲುವುಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಅಮಾನವೀಯ ಮತ್ತು ನಿರಂತರ ದೌರ್ಜನ್ಯವನ್ನು ನೋಡಿದರೆ, ಭಾರತೀಯ ಹಿಂದೂಗಳು ಈ ನುಸುಳುಕೋರರಿಗೆ ಗಲ್ಲು ಶಿಕ್ಷೆ ನೀಡುವಂತೆ ಕೋರಿದರೆ ಆಶ್ಚರ್ಯಪಡಬಾರದು ! |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!