ದೇವಸ್ಥಾನಗಳನ್ನು ಸಾಮೂಹಿಕ ಉಪಾಸನೆಯ ಕೇಂದ್ರಗಳನ್ನಾಗಿಸಿ !
* ನಮ್ಮ ಸಮೀಪದ ದೇವಸ್ಥಾನ ಗಳಲ್ಲಿ ಪ್ರತಿದಿನ ಆರತಿ, ಪ್ರಾರ್ಥನೆ ಅಥವಾ ನಾಮಜಪ ಮಾಡಲು ಒಟ್ಟುಸೇರಿ !
* ದೇವಸ್ಥಾನಗಳಲ್ಲಿ ಹಿಂದೂಗಳಿಗೆ ‘ಧರ್ಮಶಿಕ್ಷಣವರ್ಗ’ ಮತ್ತು ‘ಬಾಲಸಂಸ್ಕಾರ ವರ್ಗ’ವನ್ನು ಪ್ರಾರಂಭಿಸಿ !
* ಸಂಸ್ಕ್ರತಪಠಣ, ಯೋಗಾಸನಗಳಂತಹ ಸಂಸ್ಕ್ರತಿಯನ್ನು ಕಾಪಾಡುವ ಉಪಕ್ರಮವನ್ನು ನಡೆಸಲು ಯೋಗದಾನ ನೀಡಿ !
* ವಾರಕ್ಕೊಮ್ಮೆಯಾದರೂ ದೇವಸ್ಥಾನದ ಸಾಮೂಹಿಕ ಸ್ವಚ್ಛತೆ ಮಾಡಿ !
ದೇವಸ್ಥಾನದಲ್ಲಿ ಪ್ರದಕ್ಷಿಣೆಗಳನ್ನು ಹೇಗೆ ಹಾಕಬೇಕು ?
* ಪ್ರದಕ್ಷಿಣೆಗಳನ್ನು ಹಾಕುವ ಮೊದಲು ದೇವರಿಗೆ ಪ್ರಾರ್ಥನೆ ಮಾಡಬೇಕು.
* ಎರಡೂ ಕೈಗಳನ್ನು ಜೋಡಿಸಿ ಭಾವಪೂರ್ಣ ನಾಮಜಪವನ್ನು ಮಾಡುತ್ತಾ ಮಧ್ಯಮ ಗತಿಯಲ್ಲಿ ಪ್ರದಕ್ಷಿಣೆಗಳನ್ನು ಹಾಕಬೇಕು. ಪ್ರದಕ್ಷಿಣೆಗಳನ್ನು ಹಾಕುವಾಗ ಗರ್ಭಗುಡಿಯನ್ನು (ಅಥವಾ ದೇವಸ್ಥಾನವನ್ನು) ಸ್ಪರ್ಶಿಸಬಾರದು.
* ಪ್ರದಕ್ಷಿಣೆಗಳನ್ನು ಹಾಕುವಾಗ ದೇವರ ಹಿಂದಿನ ಬದಿಗೆ ಬಂದ ಮೇಲೆ ನಿಂತು ದೇವರಿಗೆ ನಮಸ್ಕಾರ ಮಾಡಿಯೇ ಮುಂದೆ ಹೋಗಬೇಕು.
ದೇವರ ದರ್ಶನವನ್ನು ಹೇಗೆ ಪಡೆಯಬೇಕು ?

* ದೇವಸ್ಥಾನದಲ್ಲಿ ಘಂಟೆಯನ್ನು ಮೆಲುಧ್ವನಿಯಲ್ಲಿ ಬಾರಿಸಬೇಕು.
* ದೇವರ ಮೂರ್ತಿಯ ಎದುರಿ ನಲ್ಲಿರುವ ಆಮೆಯ (ಶಿವನ ದೇವಸ್ಥಾನದಲ್ಲಿ ನಂದಿಯ) ಬದಿಯಲ್ಲಿ ನಿಂತುಕೊಂಡು ಕೈಗಳನ್ನು ಜೋಡಿಸಿ ದರ್ಶನವನ್ನು ಪಡೆದುಕೊಳ್ಳಬೇಕು.
* ಮೊದಲು ದೇವರ ಚರಣಗಳಲ್ಲಿ ದೃಷ್ಟಿಯನ್ನಿಟ್ಟು ಲೀನರಾಗಬೇಕು, ಅನಂತರ ದೇವರ ಎದೆಯ ಮೇಲೆ ಮನಸ್ಸನ್ನು ಏಕಾಗ್ರಗೊಳಿಸಬೇಕು ಮತ್ತು ಕೊನೆಗೆ ದೇವರ ಕಣ್ಣುಗಳತ್ತ ನೋಡಿ ಅವರ ರೂಪವನ್ನು ಕಣ್ಣುಗಳಲ್ಲಿ ತುಂಬಿಕೊಳ್ಳಬೇಕು.

ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ದೇವಸ್ಥಾನಗಳ ಹಣದಿಂದ ನಿರ್ಮಿಸಲಾಗುತ್ತಿದ್ದ ವಾಣಿಜ್ಯ ಸಂಕೀರ್ಣಗಳ ಯೋಜನೆಗಳು ರದ್ದು !
ಶ್ರೀ ಮಹಾಲಕ್ಷ್ಮೀದೇವಿ ಮಂದಿರ ಅಭಿವೃದ್ಧಿ ಯೋಜನೆಯ ಚಾಲನೆ
ದೇವಸ್ಥಾನ ಇನಾಮು ಭೂಮಿಗಳ ಕುರಿತಾದ ಕರಡು ಸಿದ್ಧಪಡಿಸುವ ಸಮಿತಿಯಲ್ಲಿ ದೇವಸ್ಥಾನಗಳ ಪ್ರತಿನಿಧಿಗಳ ಸೇರ್ಪಡೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!