ಪ್ರಯಾಗರಾಜ ಮಹಾಕುಂಭ ಮೇಳ 2025

ಪ್ರಯಾಗರಾಜ – ಜನವರಿ 13 ರಿಂದ ಪ್ರಾರಂಭವಾಗುವ ಮಹಾಕುಂಭ ಮೇಳದ ನಿಮಿತ್ತ ಪ್ರಯಾಗರಾಜದಲ್ಲಿನ ತ್ರಿವೇಣಿ ಸಂಗಮ ಸೇರಿದಂತೆ ಅಯೋಧ್ಯೆ, ವಾರಣಾಸಿ ಮತ್ತು ಚಿತ್ರಕೂಟ ಧಾಮಗಳನ್ನೂ ಅಲಂಕರಿಸಲಾಗುವುದು. ಈ ತೀರ್ಥಕ್ಷೇತ್ರಗಳ ಅಭಿವೃದ್ಧಿಗಾಗಿ ಸರಕಾರವು ವಿಶೇಷ ಯೋಜನೆಯನ್ನು ರೂಪಿಸಿದೆ. ಪ್ರಯಾಗರಾಜನಲ್ಲಿರುವ ತ್ರಿವೇಣಿ ಸಂಗಮ ಪ್ರದೇಶ, ಅಯೋಧ್ಯೆಯ ಶ್ರೀರಾಮ ಮಂದಿರ ಪ್ರದೇಶ, ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯ ಪ್ರದೇಶ ಮತ್ತು ಚಿತ್ರಕೂಟದ ಕಾಮದಗಿರಿ ಪ್ರದಕ್ಷಿಣಾ ಮಾರ್ಗದ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಗಮನ ನೀಡಲಾಗುತ್ತಿದೆ. ಈ ಸ್ಥಳದಲ್ಲಿ, ಸಾರಿಗೆ ವ್ಯವಸ್ಥೆ, ವಸತಿ ಸೌಲಭ್ಯಗಳು, ನೈರ್ಮಲ್ಯ, ಕುಡಿಯುವ ನೀರಿನ ಸೌಲಭ್ಯಗಳು, ವೈದ್ಯಕೀಯ ಸೌಲಭ್ಯಗಳು ಮತ್ತು ಭದ್ರತಾ ನಿರ್ವಹಣೆ ಇತ್ಯಾದಿಗಳ ಮೇಲೆ ಕೇಂದ್ರೀಕರಿಸಲಾಗಿದೆ. ಈ ಎಲ್ಲಾ ಸ್ಥಳಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಆಧುನಿಕ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
ಈ ಎಲ್ಲ ಧಾರ್ಮಿಕ ಸ್ಥಳಗಳಿಗಾಗಿ ರಾಜ್ಯದ ನಗರಾಭಿವೃದ್ಧಿ ಇಲಾಖೆ ಅಂದಾಜು 65 ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಿದ್ದು, ಈ ಕಾಮಗಾರಿಗಳ ಮೇಲ್ವಿಚಾರಣೆಗೆ ವಿಭಾಗೀಯ ಆಯುಕ್ತರ ಅಧ್ಯಕ್ಷತೆಯಲ್ಲಿ ವಿಶೇಷ ಸಮಿತಿ ರಚಿಸಲಾಗಿದೆ.
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!